ಅದೃಷ್ಟ ಒಲಿದು ಬಂದಾಗ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಜಿ ಟಿ ದೇವೇಗೌಡ

ಬೆಂಗಳೂರು: ಅದೃಷ್ಟ ಒಲಿದು ಬಂದಾಗ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಡಿ. ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ನಾನು ಅವರೊಂದಿಗೆ ಒಂದು ಬಾರಿ ಮಾತನಾಡಿದ್ದೇನೆ.
ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ. ನಾನು ವಿಶ್ಲೇಷಣೆಯನ್ನು ಮಾಡುವುದಿಲ್ಲ. ಅವರ ವಿಚಾರಕ್ಕೆ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಗಟ್ಟಿಯಾಗಿ ಸರ್ಕಾರ ಮಾಡುತ್ತಿದೆ. ನಾನು ಆ ಬಗ್ಗೆ ಆಲೋಚನೆಯನ್ನು ಮಾಡಿಲ್ಲ ಎಂದರು.
ಬಜೆಟ್ ಪ್ರಾರಂಭವಾಗುತ್ತಿದೆ. ಕ್ಷೇತ್ರದ ಸಮಸ್ಯೆಗಳು, ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳು, ಕುಡಿಯುವ ನೀರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕಕಾಲಕ್ಕೆ 900 ಖಾಸಗಿ ಹಾಗೂ ಮುಡಾ ಬಡಾವಣೆಗಳನ್ನ ಸ್ಥಳೀಯ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಿದ್ದಾರೆ.
ಅದನ್ನೆಲ್ಲಾ ಅಭಿವೃದ್ಧಿ ಮಾಡುವುದಕ್ಕೆ ಪಟ್ಟಣ ಪಂಚಾಯಿತಿಯಲ್ಲಿ ಅನುದಾನವಿಲ್ಲ. ಇದೆಲ್ಲವರ ಬಗ್ಗೆ ಅಂಕಿ-ಅಂಶವನ್ನ ಪಡೆದು ನಾನು ಮುಖ್ಯಮಂತ್ರಿಗಳ ಗಮನಕ್ಕೆ, ಸರ್ಕಾರದ ಗಮನಕ್ಕೆ ತರುವುದಕ್ಕಾಗಿ ಇಂದು ಪ್ರಗತಿ ಪರಿಶೀಲನಾ ಸಭೆಯನ್ನ ಕರೆದಿದ್ದೇನೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






