ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ಗೆ ಹೊಸ ವೋಲ್ವೋ ಬಸ್ ಸಂಚರಿಸಲಿದೆ. ಇದೇ ನವೆಂಬರ್ 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಬಸ್ ಸಂಚಾರ ಪ್ರಾರಂಭವಾಗಲಿದೆ.
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತಾದಿಗಳು ತೆರಳುವ ಸೀಸನ್ ಇದಾಗಿದ್ದರಿಂದ ಮಾಲಾಧಾರಿಗಳ ಪ್ರಯಾಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ಶಾಂತಿನಗರದಿಂದ ಶಬರಿಮಲೆ ನೀಲಕ್ಕಲ್ಗೆ 1,750 ರೂ. ಪ್ರಯಾಣ ದರವನ್ನು ಕೆಎಸ್ಆರ್ಟಿಸಿ ನಿಗದಿ ಮಾಡಿದೆ. ಶಾಂತಿನಗರದಿಂದ ನೀಲಕ್ಕಲ್ ಹಾಗೂ ನೀಲಕ್ಕಲ್ನಿಂದ ಶಾಂತಿನಗರಕ್ಕೆ ವೋಲ್ವೋ ಬಸ್ ಸಂಚಾರ ಮಾಡಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






