ಅವರು ಕೂಡ ದನದ ಮಾಂಸ ತಿನ್ನುತ್ತಿದ್ದರು: ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ದಿನೇಶ್ ಗುಂಡೂರಾವ್!

ಅಕ್ಟೋಬರ್ 3, 2024 - 16:06
 0  14
ಅವರು ಕೂಡ ದನದ ಮಾಂಸ ತಿನ್ನುತ್ತಿದ್ದರು: ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ದಿನೇಶ್ ಗುಂಡೂರಾವ್!

ಬೆಂಗಳೂರು:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. 

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.

ಸಾವರ್ಕರ್ ಬ್ರಾಹ್ಮಣ, ಹಾಗೆಂದು ಅವರು ಖಂಡಿತವಾಗಿಯೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow