ಅವಾಚ್ಯ ಪದ ಬಳಕೆ ಆರೋಪ : ನಿನ್ನ ಮಗನನ್ನೂ ಸಾಯಿಸುತ್ತೇವೆ ಹುಷಾರ್ - MLC ಸಿ.ಟಿ ರವಿಗೆ ಕೊಲೆ ಬೆದರಿಕೆ ಪತ್ರ

ಜನವರಿ 11, 2025 - 14:09
 0  11
ಅವಾಚ್ಯ ಪದ ಬಳಕೆ ಆರೋಪ : ನಿನ್ನ ಮಗನನ್ನೂ ಸಾಯಿಸುತ್ತೇವೆ ಹುಷಾರ್ - MLC ಸಿ.ಟಿ ರವಿಗೆ ಕೊಲೆ ಬೆದರಿಕೆ ಪತ್ರ

 ಬೆಂಗಳೂರು: ಬೆಳಗಾವಿ ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನದ ಕಲಾಪದಲ್ಲಿ ಭಾರೀ ಹೈಡ್ರಾಮ ಉಂಟಾಗಿತ್ತು. ಪರಿಷತ್‌ನಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ಅವರು ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು.

ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ವ್ಯಕ್ತವಾಗಿದೆ. ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ,

ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್… ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಏನಿದು ಪ್ರಕರಣ

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow