'ಆಪರೇಷನ್ ಸಿಂಧೂರ' ಹೆಸರಲ್ಲಿ ರೆಡಿ ಆಗುತ್ತಾ ಕನ್ನಡ ಸಿನಿಮಾ!?

ಮೇ 9, 2025 - 20:18
 0  12
'ಆಪರೇಷನ್ ಸಿಂಧೂರ' ಹೆಸರಲ್ಲಿ ರೆಡಿ ಆಗುತ್ತಾ ಕನ್ನಡ ಸಿನಿಮಾ!?

ಆಪರೇಷನ್ ಸಿಂಧೂರ ಪಹಲ್ಗಾಮ್‌ನಲ್ಲಿ ಸಿಂಧೂರ ಅಳಿಸಿದ ಉಗ್ರರ ಸಂಹಾರದ ಪ್ರತೀಕವಾಗಿದೆ. ಕಣ್ಣ ಮುಂದೆಯೇ ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ನೀಡುವ ಭಾರತದ ಹೋರಾಟವಾಗಿದೆ. ಭಯೋತ್ಪಾದಕರ ಬುಡಕ್ಕೆ ಬೆಂಕಿ ಇಟ್ಟಿರುವ ಅಪರೇಷನ್ ಸಿಂಧೂರ ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯೋದರಲ್ಲೂ ಅನುಮಾನವೇ ಇಲ್ಲ.

ಆಪರೇಷನ್ ಸಿಂಧೂರದ ಬಗ್ಗೆ ಎಲ್ಲೆಲ್ಲೂ ಚರ್ಚೆಯಾಗುತ್ತಿರುವಾಗಲೇ ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ.ಎಂ.ಆರ್ ರಮೇಶ್‌ ಅವರು ಈ ಬಗ್ಗೆ ಮಾತನಾಡಿದ್ದಾರೆ. 

ಇಂದು ನಿಜಕ್ಕೂ ರೋಮಾಂಚನವಾಗುತ್ತಿದೆ. ಭಯೋತ್ಪಾದಕರು ಸತ್ತಿದ್ರೆ, ನಿಜಕ್ಕೂ ಖುಷಿಯ ವಿಚಾರ. ಇಂತಹದೊಂದು ಪ್ರತೀಕಾರದ ದಾಳಿಯನ್ನ ನಾವು ಎದುರು ನೋಡುತ್ತಾ ಇದ್ವಿ. ಉಗ್ರರಿಗೆ ಭಾರತೀಯ ಸೇನೆ ತಕ್ಕದಾದ ಉತ್ತರ ಕೊಟ್ಟಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಹೆಸರಲ್ಲೇ ಒಂದು ಎಮೋಷನ್ ಇದೆ. ಸಿನಿಮಾ ಮಾಡೋಕೆ ನಿಜಕ್ಕೂ ಒಂದೊಳ್ಳೆ ಘಟನೆ ಇದು‌. ಈ ಸ್ಕ್ರೈಕ್ ಹಿಂದಿನ ಕಥೆ ಹಿಡಿದ್ರೆ ಒಂದೊಳ್ಳೆ ರೋಚಕ ಕಥೆ ಆಗುತ್ತೆ. ಯಾರಾದ್ರೂ ಈ ಸಿನಿಮಾ ಮಾಡೋರಿಗೆ ಒಳ್ಳೆಯದಾಗಲಿ. ಈಗಾಗಲೇ ಬಹುಶಃ ಯಾರಾದರೂ ಟೈಟಲ್ ರಿಜಿಸ್ಟರ್ ಮಾಡಿಸಿದ್ರೂ ಮಾಡಿಸಿರುತ್ತಾರೆ ಎಂದು ಎ.ಎಂ.ಆರ್ ರಮೇಶ್ ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow