ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ: ಡಾ. ಸಿದ್ದರಾಮ ಶ್ರೀಗಳು

ಎಪ್ರಿಲ್ 16, 2025 - 12:00
 0  12
ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ: ಡಾ. ಸಿದ್ದರಾಮ ಶ್ರೀಗಳು

ಗದಗ: ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಕಳವಳ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಮುಂಚೂಣಿಯಲ್ಲಿದ್ದಾರೆ.

 ಆದರೆ, ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರುವ ಕಾರಣ ಇರಬಹುದು. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು.

 ಶಿಕ್ಷಣ, ರಾಜಕಾರಣ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯವಾಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯದ ಪರ ಸರ್ಕಾರ ಇರಬೇಕೆಂದು ಕೇಳಿಕೊಳ್ಳುತ್ತೇನೆ. ರಾಜಕೀಯ ಉದ್ದೇಶದಿಂದ ಜಾತಿಗಣತಿ ಜಾರಿಗೆ ತರುತ್ತಿರಬಹುದು. ಜಾತಿ ಜನಗಣತಿಯಲ್ಲಿ ಲಿಂಗಾಯತರಿಗೆ ಹೇಗೆ ಅನ್ಯಾಯವಾಗಿದೆ. ಅದೇ ರೀತಿ ಒಕ್ಕಲಿಗರಿಗೂ ಅನ್ಯಾಯವಾದಂತಿದೆ. ಹಾಗಂತ ಕಾಂಗ್ರೆಸ್ ಪಕ್ಷದ ಸಚಿವ ಸಂಪುಟದ ಪ್ರಮುಖ ಸಚಿವರೇ ಹೇಳಿದ್ದಾರೆ.

 ಸಂಪುಟದಲ್ಲಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರು ಈ ವರದಿಯಲ್ಲಿ ದೋಷವಿದೆ. ವರದಿ ಸಮರ್ಪಕವಾಗಿಲ್ಲ, ಇದನ್ನು ಮರಳಿ ಪರಿಶೀಲನೆ ಮಾಡಬೇಕು ಎಂದು ಕೆಲ ಸಚಿವರು ಹೇಳಿದ್ದಾರೆ. 17 ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಏನು ತೀರ್ಮಾನ ಆಗುತ್ತೆ ಕಾದು ನೋಡೋಣ ಎಂದು ಸ್ವಾಮೀಜಿ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow