ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಧೃತಿಗೆಟ್ಟಿಲ್ಲ: ಹೆಚ್‌ ಡಿ ದೇವೇಗೌಡ

ಡಿಸೆಂಬರ್ 7, 2024 - 21:32
 0  10
ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಧೃತಿಗೆಟ್ಟಿಲ್ಲ: ಹೆಚ್‌ ಡಿ ದೇವೇಗೌಡ

ನವದೆಹಲಿ: ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಧೃತಿಗೆಟ್ಟಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸೋತರೂ ಅವರ ನಾಯಕತ್ವ‌ ಮುಂದೆ ಬೆಳೆಯುತ್ತೆ, ಅವರಿಗೆ ಶಕ್ತಿ ಕೊಡಲು ಪಕ್ಷ ನಿರ್ಣಯ ಮಾಡಿದೆ. ಸೋಲಿನಿಂದ ಧೃತಿಗೆಟ್ಟಿಲ್ಲ, ಹೋರಾಟ ಮಾಡುವ ಕೆಚ್ಚೆದೆ ಇದೆ.

ಸೋಲನ್ನು ಸಮತಲದಲ್ಲಿ ತೆಗೆದುಕೊಂಡಿದ್ದೇವೆ, ಇವತ್ತು ಜನರು ಸೋಲಿಸಿದ್ದಾರೆ, ನಾಳೆ ಗೆಲ್ಲಿಸುತ್ತಾರೆ, ಸೋಲು ಗೆಲುವಿಗಾಗಿ ಧೃತಿಗೆಟ್ಟು ಕೂರಲು ಸಾಧ್ಯವಿಲ್ಲ. ನಿಖಿಲ್ ಸಿನಿಮಾ ಬಿಟ್ಟು ಬಹಳ ದಿನ ಆಗಿದೆ. ಹಿರಿಯ ನಾಯಕರ ಒಂದಾಗಿ ಸದಸ್ಯತ್ವ ಅಭಿಯಾನ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಎಲ್ಲ ನಾಯಕರು ಸೇರಿ ಪಕ್ಷವನ್ನು ಮರು ಸಂಘಟನೆ ಮಾಡಬೇಕು ಅಂದರೆ ಮಾಡುತ್ತಾರೆ ಎಂದು ನಿಖಿಲ್ ಗೆ ರಾಜ್ಯಧ್ಯಕ್ಷ ಜವಾಬ್ದಾರಿ ನೀಡುವ ಬಗ್ಗೆ ಸುಳಿವು ನೀಡಿದರು. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow