ಒಂದು ದಿನವೂ ಹೋಗಿ ನೀನು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿಲ್ಲ: HDK ವಿರುದ್ಧ ಏಕವಚನದಲ್ಲಿ ಡಿಕೆಶಿ ವಾಗ್ದಾಳಿ

ಮಂಗಳೂರು: ಒಂದು ದಿನವೂ ಹೋಗಿ ನೀನು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿಲ್ಲ ಎಂದು HDK ವಿರುದ್ಧ ಏಕವಚನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇವರ ಅಳು ಎಲ್ಲಾ ಬರೋದೇ ಎಲೆಕ್ಷನ್ ಟೈಮ್ನಲ್ಲಿ. ಯಾವುದಾದರೂ ಒಂದು ಗುರುತಿಸುವ ಕೆಲಸ ಚನ್ನಪಟ್ಟಣಕ್ಕೆ ಮಾಡಿರೋದನ್ನ ತೋರಿಸು. ಕೆರೆ ಮಾಡಿದ್ದು ಯೋಗೇಶ್ವರ್, ದುಡ್ಡು ಕೊಟ್ಟಿದ್ದು ನಾನು. ನೀನು ಮುಖ್ಯಮಂತ್ರಿ ಆಗಿದ್ದಾಗಲೇ ಮಾಡಿಲ್ಲ.
ಎಂಎಲ್ಎ ಆಗಿದ್ದಾಗ ಬಿಜೆಪಿ ಜೊತೆಗೆ ಸಂಪರ್ಕ ಇತ್ತು. ಗುರುತು ಮಾಡೋ ಕೆಲಸ ಮಾಡಬೇಕಿತ್ತಲ್ಲ. ಸುಮ್ಮನೆ ವೋಟಿಗೋಸ್ಕರ ಬಂದು ಮಾತನಾಡೋದಲ್ಲ. ಅಭ್ಯರ್ಥಿಗೆ ಲಾಸ್ ಏನೂ ಆಗಿಲ್ಲ, ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧ ಇಲ್ಲ. ಅವರು ಸೋತಿದ್ದು ಮಂಡ್ಯ ಹಾಗೂ ರಾಮನಗರದಲ್ಲಿ. ನೀನು, ನಿನ್ನ ಧರ್ಮಪತ್ನಿ ಇದ್ದರೂ ಇಲ್ಲಿಗೆ ನೀನು ಏನು ಕೊಟ್ಟೆ? ಚನ್ನಪಟ್ಟಣಕ್ಕೆ ನೀನು ಏನು ಕೊಟ್ಟೆ ಎಂದು ಹೇಳಬೇಕು ಎಂದು ಆಗ್ರಹಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






