ಕಳಪೆ ಪ್ರದರ್ಶನ: ಟೀಮ್ ಇಂಡಿಯಾಗೆ ಹೊಸ ಬ್ಯಾಟಿಂಗ್ ಕೋಚ್ ಆಯ್ಕೆ!?

ಭಾರತ ತಂಡದ ಇತ್ತೀಚಿನ ಟೆಸ್ಟ್ ಸರಣಿ ಸೋಲುಗಳಿಗೆ ಬ್ಯಾಟಿಂಗ್ ವಿಭಾಗದ ವೈಫಲ್ಯವೇ ಮುಖ್ಯ ಕಾರಣ ಎಂಬುದು ಸ್ಪಷ್ಟ. ರೋಹಿತ್, ಕೊಹ್ಲಿ, ಮತ್ತು ರಾಹುಲ್ ಅವರ ಇತ್ತೀಚಿನ ಪ್ರದರ್ಶನ ಇನ್ನಷ್ಟು ಕಳಪೆಯಾಗಿದೆ. ಹೀಗಾಗಿ ಟೀಮ್ ಇಂಡಿಯಾಗೆ ಬ್ಯಾಟಿಂಗ್ ಕೋಚ್ ಅನ್ನು ನೇಮಿಸಲು ಬಿಸಿಸಿಐ ಚಿಂತನೆ ನಡೆಸಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ಸೋಲಿಗೆ ಪ್ರಮುಖ ಕಾರಣ ಬ್ಯಾಟಿಂಗ್ ವೈಫಲ್ಯ. ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭಾರತದ ಬಹುತೇಕ ಬ್ಯಾಟರ್ಗಳು ವಿಫಲರಾಗಿದ್ದರು. ಅದರಲ್ಲೂ ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟ್ಸ್ಮನ್ ಒಂದೇ ರೀತಿ ಔಟಾಗಿದ್ದು ಅಚ್ಚರಿಗೆ ಕಾರಣವಾಗಿತ್ತು. ಹೀಗಾಗಿ BCCI ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಗೌತಮ್ ಗಂಭೀರ್ ನೇತೃತ್ವದ ಸಿಬ್ಬಂದಿ ವರ್ಗದಲ್ಲಿ ಬ್ಯಾಟಿಂಗ್ ಕೋಚ್ ಇರಲಿಲ್ಲ. ಇದಕ್ಕೆ ಮುಖ್ಯ ಕಾರಣ ಉತ್ತಮ ಬ್ಯಾಟರ್ಗಳಾಗಿ ಗುರುತಿಸಿಕೊಂಡಿದ್ದ ಗಂಭೀರ್ ಹಾಗೂ ಅಭಿಷೇಕ್ ನಾಯರ್ ಸಿಬ್ಬಂದಿ ವರ್ಗದಲ್ಲಿದ್ದು. ಈ ಹಿಂದೆ ಕೆಕೆಆರ್ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದ್ದು ಅಭಿಷೇಕ್ ನಾಯರ್.
ಹೀಗಾಗಿಯೇ ಟೀಮ್ ಇಂಡಿಐಆ ಸಹಾಯಕ ಕೋಚ್ ಹುದ್ದೆಯೊಂದಿಗೆ ಅಭಿಷೇಕ್ ನಾಯರ್ ಅವರನ್ನೇ ಬ್ಯಾಟಿಂಗ್ ಕೋಚ್ ಸ್ಥಾನದಲ್ಲೂ ಗಂಭೀರ್ ಮುಂದುವರೆಸಿದ್ದರು. ಆದರೀಗ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ಸರಣಿಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳ ಕಳಪೆ ಪ್ರದರ್ಶನವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






