ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಅವರಿಗೆ ಜೈಲುಗಳು ಸಾಕಾಗಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು!

ಸೆಪ್ಟೆಂಬರ್ 17, 2024 - 13:54
 0  14
ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಅವರಿಗೆ ಜೈಲುಗಳು ಸಾಕಾಗಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು!

ಕಲಬುರ್ಗಿ:- ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಬಿಜೆಪಿಯವರಿಗೆ ಜೈಲುಗಳು ಸಾಕಾಗಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಕಾಂಗ್ರೆಸ್ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ ಎಂಬ ಆರೋಪಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಅವರಿಗೆ ಜೈಲುಗಳು ಸಾಕಾಗಲ್ಲ ಎಂದರು.

ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಜನ ಅನುಸರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ಅವರು ವಾಗ್ದಾಳಿ ಮಾಡಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow