ಕಾಲ್ತುಳಿತದ ಎಫೆಕ್ಟ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

ಜೂನ್ 10, 2025 - 14:03
 0  11
ಕಾಲ್ತುಳಿತದ ಎಫೆಕ್ಟ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಉಸಿರುಚೆಲ್ಲಿದರೆ, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ದುರಂತ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತಮತ್ತು ಸೌತ್ ಆಫ್ರಿಕಾನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ.

ಯಾವುದೇ ನಿರ್ದಿಷ್ಟ ಕಾರಣ ನೀಡದೇ ಭಾರತೀಯ ಕ್ರಿಕೆಟ್ ಮಂಡಳಿ ( ಬಿಸಿಸಿಐ ) ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಪ್ರಕಟಣೆಯಲ್ಲಿ ಬೆಂಗಳೂರಿನ ಪಂದ್ಯಗಳನ್ನು ರಾಜ್ಕೋಟ್ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಇತ್ತ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಅದರಂತೆ ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತಮತ್ತು ಸೌತ್ ಆಫ್ರಿಕಾನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್ಕೋಟ್ನಲ್ಲಿ ಆಯೋಜಿಸಲಾಗುತ್ತಿದೆ.

ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ ವುಮೆನ್ಸ್ ಒಡಿಐ ವರ್ಲ್ಡ್ಕಪ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇದೀಗ ಕಾಲ್ತುಳಿತದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಮಹಿಳಾ ಏಕದಿನ ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಬೇರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow