ಕಾಲ್ತುಳಿತ ಕೇಸ್: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಗೆ ಗೇಟ್ ಪಾಸ್

ಜೂನ್ 6, 2025 - 15:51
 0  12
ಕಾಲ್ತುಳಿತ ಕೇಸ್: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಗೆ ಗೇಟ್ ಪಾಸ್

ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿಯಲ್ಲಿ ಬುಧುವಾರ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಬಂಧ ರಾಜ್ಯ ಸರ್ಕಾರ ಕಮಿಷನರ್ ಸೇರಿ 5 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇನ್ನು ಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಎಂಎಲ್ಸಿ ಗೋವಿಂದರಾಜುಗೆ ಕೋಕ್ ನೀಡಲಾಗಿದೆ.

ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜನೆಗೆ ಸಿಎಂ ಮೇಲೆ ಒತ್ತಡ ಹೇರಿದ್ದ ಗೋವಿಂದರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೋಕ್ ನೀಡಲಾಗಿದೆ. ಗೋವಿಂದರಾಜು ಅವರು ಸದ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದಾರೆ.

ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ದ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow