ಕುಡಿಯುವ ನೀರಿಗಾಗಿ ಸಾವಿರಾರು ರೂಪಾಯಿ ಖರ್ಚು: ಬೆಂಗಳೂರಿನ ಸ್ಥಿತಿ ಕಂಡು ದೇವೇಗೌಡರು ಕಳವಳ!

ಬೆಂಗಳೂರು:- ಕುಡಿಯುವ ನೀರಿಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿರುವ ಬೆಂಗಳೂರಿನ ಸ್ಥಿತಿ ಕಂಡು ದೇವೇಗೌಡರು ಕಳವಳ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ಬಗ್ಗೆ ರಾಜ್ಯಸಭೆಯಲ್ಲಿ ದನಿಯೆತ್ತಿದ ಅವರು, ಬೆಂಗಳೂರಿನಲ್ಲಿ ನಾಲ್ವರಿರುವ ಕುಟುಂಬವೊಂದು ಕುಡಿಯುವ ನೀರಿಗೆ ಒಂದು ತಿಂಗಳಿಗೆ 20,000 ರೂ. ವ್ಯಯಿಸಬೇಕಾದ ಸ್ಥಿತಿ ಇದೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು.
ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರದ ಗಮನ ಸೆಳೆದರು. ಕರ್ನಾಟಕ ರಾಜಧಾನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದರು.
ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ದೇವೇಗೌಡರು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ನಿಮ್ಮ ಪ್ರತಿಕ್ರಿಯೆ ಏನು?






