ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ FIR ದಾಖಲು!

ನವೆಂಬರ್ 5, 2024 - 12:01
 0  17
ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ FIR ದಾಖಲು!

 ಬೆಂಗಳೂರು: ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಹೆಚ್​ಡಿ ಕುಮಾರಸ್ವಾಮಿ ಅವರು ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್‌.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು.

ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದರು.ಈ ವಿಚಾರವಾಗಿ ಎಡಿಜಿಪಿ ಕೋರ್ಟ್‌ನ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow