ಕೇಂದ್ರ ಸರ್ಕಾರದ ಉದ್ದೇಶ ಒಳ್ಳೆಯದಾಗಿಲ್ಲ, ಒಳ್ಳೆ ಉದ್ದೇಶ ಇಟ್ಟುಕೊಂಡಿಲ್ಲ: ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ಉದ್ದೇಶ ಒಳ್ಳೆಯದಾಗಿಲ್ಲ, ಒಳ್ಳೆ ಉದ್ದೇಶ ಇಟ್ಟುಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ನಗರದಲ್ಲಿ ರಂಜಾನ್ ಹಬ್ಬದ ಬಗ್ಗೆ ಮಾತನಾಡಿದ ಅವರು, ರಂಜಾನ್ ಪವಿತ್ರವಾದ ಹಬ್ಬ. ಪುನರುತ್ಥಾನ ಮಾಡಿಕೊಳ್ಳಲು ಒಂದು ಅವಕಾಶ ಇದು. ಎಲ್ಲ ಧರ್ಮಗಳು ಇರುವ ದೇಶ ನಮ್ಮದು.
ಪ್ರಚೋದನಾಕಾರಿ ಮಾತುಗಳಿಗೆ ಇತಿಶ್ರೀ ಹಾಡಬೇಕು. ವಕ್ಫ್ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಪ್ರದರ್ಶನ ಮಾಡ್ತಿದ್ದಾರೆ. ವಕ್ಫ್ ವಿರೋಧಿಸಿ ನಮ್ಮ ಸರ್ಕಾರ ಕೂಡ ನಿಲುವಳಿ ಮಾಡಿದೆ. ಕಾನೂನುಬದ್ದವಾಗಿ ಮುಂದೆ ಸಾಗಬೇಕು. ಕೇಂದ್ರ ಸರ್ಕಾರದ ಉದ್ದೇಶ ಒಳ್ಳೆಯದಾಗಿಲ್ಲ, ಒಳ್ಳೆ ಉದ್ದೇಶ ಇಟ್ಟುಕೊಂಡಿಲ್ಲ. ವಿಶ್ವಾಸ ಪ್ರೀತಿಯಿಂದ ಗೆಲ್ಲಬೇಕೇ ಹೊರತು ದ್ವೇಷದಿಂದ ಆಗಲ್ಲ ಎಂದು ಹೇಳಿದರು.
ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸಚಿವ ರಾಜೇಂದ್ರ ರಾಜಣ್ಣ ಅವರ ಕೊಲೆಗೆ ಸುಪಾರಿ ಕೊಟ್ಟಿರುವ ವಿಚಾರ ಬಹಳ ಗಂಭೀರವಾದುದು. ತನಿಖೆ ಮಾಡಿ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.
ರಾಜಣ್ಣ ಕೂಡ ಹನಿಟ್ರ್ಯಾಪ್ ಬಗ್ಗೆ ದೂರು ಕೊಟ್ಟಿದ್ದಾರೆ. ಮಾಹಿತಿ ಸಂಗ್ರಹ ಆಗಿ, ಅದರಲ್ಲಿ ಯಾರಾರಿದ್ದಾರೋ ಎಲ್ಲರ ಹೆಸರು ಹೊರ ಬರಲೇಬೇಕು. ಪರಮೇಶ್ವರ್ - ರಾಜಣ್ಣ ಬಹಳ ಒಳ್ಳೆ ಬಾಂಧವ್ಯ ಇದೆ. ಅವರಿಬ್ಬರೂ ಬೆಂಚ್ ಮೇಟ್ಸ್ ಕೂಡ. ಹೀಗಾಗಿ ಒಳ್ಳೆಯ ತನಿಖೆಯೇ ಆಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






