ಕೊಡಗಿನ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಅಕ್ಟೋಬರ್ 20, 2024 - 20:13
 0  14
ಕೊಡಗಿನ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಡಿಕೇರಿ:- ಕೊಡಗಿನ ಬಿಜೆಪಿ ಮುಖಂಡನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ  ಜೀವಾವಧಿ ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.  ಬಾಲಚಂದ್ರ ಕಳಗಿ ಕೊಲೆಯಾಗಿದ್ದ ದುರ್ದೈವಿ. ಹರಿಪ್ರಸಾದ್ ಹಾಗೂ ಲಾರಿ ಚಾಲಕ ಮಡಿಕೇರಿಯ ಜಯನ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ. ಅ.16ರಂದು ಇಬ್ಬರನ್ನು ದೋಷಿಗಳೆಂದು ತೀರ್ಪು ನೀಡಿದ್ದ ಕೋರ್ಟ್‌ ಶನಿವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

10 ಸಾವಿರ ರೂ. ದಂಡದ ಮೊತ್ತವನ್ನು ಮೃತ ಬಾಲಚಂದ್ರ ಕಳಗಿ ಅವರ ಪತ್ನಿಗೆ ನೀಡುವಂತೆ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ  ಸರ್ಕಾರಿ ಅಭಿಯೋಜಕ ದೇವೇಂದ್ರಪ್ಪ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow