ಕೊನೆಗೂ ಬಯಲಾಯ್ತು ಕೊಲೆ ರಹಸ್ಯ.! ಮಹಾಲಕ್ಷ್ಮಿಯೇ ತನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಳು ಎಂದು ಡೆತ್ʼನೋಟ್ʼನಲ್ಲಿ ಉಲ್ಲೇಖ

ಬೆಂಗಳೂರು: ಇಡೀ ದೇಶವನ್ನೆ ಬೆಚ್ಚಿಬೀಳಿಸಿರೋ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗೆ ರೋಚಕ ತಿರುವು ಸಿಕ್ಕಿದೆ. ಮಹಾಲಕ್ಷ್ಮಿಯನ್ನು ಕೊಂದು ಆಕೆಯ ದೇಹವನ್ನು 53 ಭಾಗಗಳಾಗಿ ಕತ್ತರಿಸಿ ಆ ಎಲ್ಲಾ ಮಾಂಸದ ತುಂಡುಗಳನ್ನು ಫ್ರಿಡ್ಜ್ನಲ್ಲಿಟ್ಟು ಮುಕ್ತಿ ರಂಜನ್ ಪರಾರಿಯಾಗಿದ್ದ. ಪೊಲೀಸರು ಆತನನ್ನ ಒಡಿಶಾದ ಭದ್ರಕ್ನಲ್ಲಿ ಪತ್ತೆಹಚ್ಚಿದ್ದರು. ಆದ್ರೆ ಪೊಲೀಸರು ಆತನನ್ನ ಪತ್ತೆ ಮಾಡುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಆತ ಮಹಾಲಕ್ಷ್ಮಿ ಕೊಲೆ ಸಂಬಂಧ ಬರೆದಿದ್ದ ಡೆತ್ನೋಟ್ ಪೊಲೀಸರಿಗೆ ಸಿಕ್ಕಿತ್ತು.
ಒರಿಯಾ ಭಾಷೆಯಲ್ಲಿ ಬರೆಯಲಾಗಿದ್ದ ಆ ಡೆತ್ ನೋಟ್ ಅನ್ನು ಕನ್ನಡಕ್ಕೆ ಭಾಷಾಂತರಿಸಲಾಗಿದೆ. ಭಾಷಾಂತರದ ಪ್ರತಿ ಈಗ ಪೊಲೀಸರಿಗೆ ಲಭ್ಯವಾಗಿದ್ದು, ಅದರಲ್ಲಿನ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮೊದಲು ಬಂದ ವರದಿಗಳಲ್ಲಿ ಆತ ಡೆತ್ ನೋಟ್ನಲ್ಲಿ ಆಕೆ ಕೊಲೆ ಮಾಡಿದ್ದಕ್ಕೆ ಕೊಲೆಗೂ ಮುನ್ನ ನಡೆದಿದ್ದ ಜಗಳವೇ ಕಾರಣ ಎಂದು ಹೇಳಲಾಗಿತ್ತು. ಆದರೆ, ಜಗಳವೊಂದೇ ಕಾರಣವಲ್ಲ. ಅದಕ್ಕೂ ಮಿಗಿಲಾದ ವಿಚಾರಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾಲಕ್ಷ್ಮಿ ತನ್ನನ್ನು ಕೊಲ್ಲಲು ಮುಂದಾಗಿದ್ದಳು ಮತ್ತು ದೇಹವನ್ನು ಎಸೆಯುವುದಕ್ಕೆ ಕಪ್ಪು ಸೂಟ್ಕೇಸ್ ಸಹ ಖರೀದಿಸಿದ್ದಳು ಎಂದು ಬರೆದಿದ್ದಾನೆ. ಇದಕ್ಕೆ ಸರಿಯಾಗಿ ಮಹಾಲಕ್ಷ್ಮಿ ಮನೆಯೊಳಗಿನ ಫ್ರಿಡ್ಜ್ ಬಳಿ ಕಪ್ಪು ಸೂಟ್ಕೇಸ್ ಕೂಡ ಪತ್ತೆಯಾಗಿತ್ತು. ನನ್ನನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಸೂಟ್ಕೇಸ್ನಲ್ಲಿ ಹಾಕಿ ನಂತರ ಎಸೆಯುವುದು ಅವಳ ಉದ್ದೇಶವಾಗಿತ್ತು. ನಾನು ಅವಳನ್ನು ಕೊಲ್ಲದಿದ್ದರೇ, ಮಹಾಲಕ್ಷ್ಮಿ ನನ್ನನ್ನು ಕೊಂದು ನನ್ನ ದೇಹವನ್ನು ಎಸೆಯುತ್ತಿದ್ದಳು. ನಾನು ಅವಳನ್ನು ಆತ್ಮರಕ್ಷಣೆಗಾಗಿ ಕೊಂದಿದ್ದೇನೆ. ಚಿನ್ನದ ಸರ ಮತ್ತು 7 ಲಕ್ಷ ರೂ. ನೀಡಿದ್ದರೂ ಸಹ ಮಹಾಲಕ್ಷ್ಮಿಯ ಬೇಡಿಕೆ ನಿರಂತರವಾಗಿ ಹೆಚ್ಚುತ್ತಲೇ ಇತ್ತು. ಅದಕ್ಕಾಗಿ ಆಕೆಯೂ ನನ್ನನ್ನು ಥಳಿಸಿದ್ದಾಳೆ. ಆಕೆಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದಿರುವಾಗ ಮಹಾಲಕ್ಷ್ಮಿ ನನ್ನನ್ನು ಥಳಿಸುತ್ತಿದ್ದಳು ಎಂದು ಆರೋಪಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






