ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬರಲಿದ್ದಾರೆ ನಟ ಅಮಿತಾಬ್ ಬಚ್ಚನ್!

ಜನವರಿ 15 ರಂದು ಕೊಪ್ಪಳದಲ್ಲಿ ಗವಿಸಿದ್ದೇಶ್ವರ ಜಾತ್ರೆ ನಡೆಯಲಿದೆ. ಪ್ರತಿ ಬಾರಿ ಜಾತ್ರೆಯಲ್ಲಿ ವಿಶೇಷ ವ್ಯಕ್ತಿಗಳು ಆಗಮಿಸುತ್ತಾರೆ. ಈ ಭಾರಿಯ ಗವಿಮಠದ ಜಾತ್ರೆಗೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗುತ್ತಿದೆ. ಹೌದು ಈ ಭಾರಿ ಬಾಲಿವುಡ್ ಸ್ಟಾರ್ ನಟ ಅಮಿತಾಬ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಅಮಿತಾಭ್ ಗೆ ಆಹ್ವಾನ ಪತ್ರ ನೀಡಿದೆ.
ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿಯವರು ಇತ್ತೀಚೆಗೆ ಅಮಿತಾಭ್ ಬಚ್ಚನ್ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆ. ಪ್ರೀತಿಯಿಂದ ಆಮಂತ್ರಣ ಪತ್ರಿಕೆ ಸ್ವೀಕರಿಸಿ ಈ ಅಮಿತಾಭ್ ಬಚ್ಚನ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗವಿಸಿದ್ದೇಶ್ವರ ಮಠದ ಜಾತ್ರೆ ದಕ್ಷಿಣ ಭಾರತದ ಕುಂಭ ಮೇಳ ಎಂದೆ ಖ್ಯಾತಿ ಪಡೆದಿದೆ. ಜನವರಿ 15ರಂದು ಈ ಜಾತ್ರೆ ನಡೆಯಲಿದೆ. ಒಂದೊಮ್ಮೆ ಅಮಿತಾಭ್ ಬಚ್ಚನ್ ಜಾತ್ರೆಗೆ ಆಗಮಿಸಿದರೆ
ನಿಮ್ಮ ಪ್ರತಿಕ್ರಿಯೆ ಏನು?






