ಕೋರ್ಟ್ ಮೆಟ್ಟಿಲೇರಿದ ಐಶು ಪುತ್ರಿ! ಆರಾಧ್ಯ ಮುನಿಸು ಯಾರ ಮೇಲೆ?

ಐಶ್ವರ್ಯ ರೈ ಅವರ ಪುತ್ರಿ ಆರಾಧ್ಯ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೆಲ ವೆಬ್ಸೈಟ್, ಯೂಟ್ಯೂಬ್ ಚಾನೆಲ್ ಸೇರಿ ಹಲವು ಆನ್ಲೈನ್ ಪ್ಲಾಟ್ಫಾರ್ಮ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿದ್ದಾರೆ.
ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯ ರೈ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆರಾಧ್ಯ ಅರ್ಜಿ ಪುರಸ್ಕರಿಸಿದ ದೆಹಲಿ ಹೈಕೋರ್ಟ್ ಕೆಲವರಿಗೆ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ಮುಖ್ಯ ಕಾರಣ ತನ್ನ ವಿರುದ್ಧ ಗೂಗಲ್ ಸೇರಿದಂತೆ ಕೆಲ ವೆಬ್ಸೈಟ್, ಯೂಟ್ಯೂಬ್ ಚಾನೆಲ್ ಸೇರಿದಂತೆ ಆನ್ಲೈನ್
ಪ್ಲಾಟ್ಫಾರ್ಮ್ಗಳಲ್ಲಿ ತಪ್ಪು ಮಾಹಿತಿ ನೀಡಲಾಗುತ್ತಿದೆ. ಇದನ್ನು ನಿರ್ಬಂಧಿಸುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ಆರಾಧ್ಯ ರೈ ಬಚ್ಚನ್ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ಜಸ್ಟೀಸ್ ಮಿನಿ ಪುಷ್ಕರನ್ ಈ ಅರ್ಜಿ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಉತ್ತರ ನೀಡುವಂತೆ ಗೂಗಲ್ ಸೇರಿದಂತೆ ಹಲವು ವೆಬ್ಸೈಟ್ಗಳಿಗೆ ನೋಟಿಸ್ ನೀಡಿದೆ. ಇದೇ ವೇಳೆ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






