ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ..!

ಫೆಬ್ರವರಿ 14, 2025 - 10:27
 0  9
ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ..!

 ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೊರೋನಾ ಭ್ರಷ್ಟಾಚಾರದ ಕುರಿತ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.

ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕೋವಿಡ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಮುಂದಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ, ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರಿಂದ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ಇದೀಗ, ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿ ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow