ಖರ್ಗೆ ಅವರನ್ನು ಭೇಟಿ ಮಾಡದೆ ಬಿಜೆಪಿ ಕಚೇರಿಗೆ ಹೋಗಲೇ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಖರ್ಗೆ ಅವರನ್ನು ಭೇಟಿ ಮಾಡದೇ ಬಿಜೆಪಿ ಕಚೇರಿಗೆ ಭೇಟಿ ನೀಡಲೇ?. ಅವರು ರಾಷ್ಟ್ರದ ಅಧ್ಯಕ್ಷರು, ನಾನು ರಾಜ್ಯದ ಅಧ್ಯಕ್ಷ. ಅವರು ನಮ್ಮ ರಾಜ್ಯಕ್ಕೆ ಬಂದಾಗ ಹೋಗಿ ಭೇಟಿ ಮಾಡಿ ಗೌರವ ನೀಡುವುದು ನಮ್ಮ ಕೆಲಸ. ಪಕ್ಷದ ವಿಚಾರಗಳು, ನೂತನ ಕಾಂಗ್ರೆಸ್ ಕಚೇರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು, ಈ ತಿಂಗಳಿನಲ್ಲಿಯೇ ದಿನಾಂಕ ನೀಡಿ ಎಂದು ಮನವಿ ಮಾಡಲು ಹೋಗಿದ್ದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಟೀಕೆ ಮಾಡಲಿ ಎಂದೇ ಹೇಳಿಕೆ ನೀಡಿದ್ದೇನೆ
ನಟ್ಟು- ಬೋಲ್ಟ್ ವಿಚಾರವಾಗಿ ವಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ಕೇಳಿದಾಗ, “ಟೀಕೆ ಮಾಡಲಿ ಎಂದು ನಾನು ಹೇಳಿಕೆ ನೀಡಿದ್ದು. ನಾನು ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ಸಹಾಯ ತೆಗೆದುಕೊಂಡವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಯಾರಿಗಾಗಿ ಮಾಡಿರುವುದು. ಚಿತ್ರರಂಗ ಬೆಳೆಯಲಿ ಎಂದು. ಅವರ ಕ್ಷೇತ್ರದ ಬಗ್ಗೆ ಅವರೇ ಪ್ರಚಾರ ಮಾಡಿಕೊಳ್ಳದೇ ಇದ್ದರೆ ನಾವು ಬೆಳಗ್ಗೆ ಸಂಜೆ ಪ್ರಚಾರ ಮಾಡಿಕೊಳ್ಳಲು ಆಗುತ್ತದೆಯೇ?” ಎಂದು ತಿರುಗೇಟು ನೀಡಿದರು.
ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಲು ಸರ್ಕಾರ, ಜನ ಬೇಕು:
ನಿಮ್ಮ ಪ್ರತಿಕ್ರಿಯೆ ಏನು?






