ಖಾಕಿ ಆಯ್ತು.. ಖಾದಿ ಆಯ್ತು.. ಈಗ ಸ್ವಾಮೀಜಿ ಸರದಿ: ರನ್ಯಾ ಚಿನ್ನದ ಬಿಸ್ಕೆಟ್ ಕಳ್ಳಸಾಗಣಿಕೆ ಹಿಂದೆ ಸ್ವಾಮೀಜಿಯ ಕೈವಾಡ!?

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ರಹಸ್ಯ ಬಗೆದಷ್ಟು ಬಯಲಾಗುತ್ತಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ಮಾಹಿತಿಗಳು ರಿವೀಲ್ ಆಗುತ್ತಿದೆ. ಈ ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಸಚಿವರಿಬ್ಬರ ಕೈವಾಡ ಅಂತಾ ಬಿಜೆಪಿ ಬಾಂಬ್ ಹಾಕಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹೀಗಿರುವಾಗಲೇ ಚಿನ್ನದ ಬಿಸ್ಕೇಟ್ ಕಳ್ಳಸಾಗಣಿಕೆ ಹಿಂದೆ ಪ್ರಭಾವಿ ಸ್ವಾಮೀಜಿ ಕೈವಾಡವಿದೆ ಎಂದು ತಿಳಿದು ಬಂದಿದೆ.
ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈನಲ್ಲಿ ಆಫೀಸ್ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್ನಲ್ಲಿ ಸ್ವಾಮೀಜಿ ಕ್ರಿಫ್ಟೋ ಕರೆನ್ಸಿ, ಹಣ ವಿನಿಮಯ ವ್ಯವಹಾರ ಮಾಡುತ್ತಿದ್ದರು. ಸ್ವಾಮೀಜಿ ರಾಜಕೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿನಲ್ಲಿನ ಸ್ವಾಮೀಜಿ ಮನೆ ಮೇಲೆ ಡಿಆರ್ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






