ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು..!

ಜೂನ್ 14, 2025 - 10:25
 0  13
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು..!

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಕರ್ನಾಟಕದಾದ್ಯಂತ ಮಾತ್ರವಲ್ಲದೆ, ದೇಶದಾದ್ಯಂತ ಸುದ್ದಿಯಾಗಿತ್ತು. ಅದಾದ ನಂತರ, ಜಾನುವಾರುಗಳ ವಿರುದ್ಧ ಅಂಥದ್ದೇ ಕೆಲವು ಕ್ರೌರ್ಯದ ಪ್ರಕರಣಗಳು ವರದಿಯಾಗಿದ್ದವು.

ದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬರಮಪ್ಪ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳು ಗರ್ಭಾವಸ್ಥೆಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ. ರಕ್ತಸ್ರಾವದಿಂದ ಬಳಲುತ್ತಿದ್ದ ಹಸುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸದ್ಯ ಸ್ಥಳಿಯ ಪೊಲೀಸರಿಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ಹೋಗಿದ್ದಾರಂತೆ. 10 ಗಂಟೆಗೆ ಪಿಎಸ್ ಬರ್ತಾರೆ ಎಂದು ಹೇಳಿ ಹೋದರು. ಮೂರುಸಂಜಾದ್ರೂ ಯಾರೂ ಬಂದಿಲ್ಲ. ಇವತ್ತ ಹಿಂಗ ಮಾಡ್ಯಾರ ನಾಳೆ ಮತ್ತೇನರ ಮಾಡ್ತಾರೋ ಗೊತ್ತಿಲ್ಲ ಎಂದು ಹಸುವಿನ ಮಾಲಿಕ ದಂಪತಿಗಳಾದ ಬರಮಪ್ಪ ಪತ್ನಿ ಕೆಂಚವ್ವ ಪತ್ರಿಕೆ ಎದುರು ತಮ್ಮ ಅಳಲು ತೋಡಿಕೊಂಡರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow