ಗುರು ಪ್ರಸಾದ್‌ ಕೊನೆ ಚಿತ್ರಕ್ಕೆ 2ನೇ ಪತ್ನಿಯಿಂದಲೇ ಸಂಕಷ್ಟ: “ಎದ್ದೇಳು ಮಂಜುನಾಥ 2” ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ!

ಫೆಬ್ರವರಿ 20, 2025 - 19:10
 0  11
ಗುರು ಪ್ರಸಾದ್‌ ಕೊನೆ ಚಿತ್ರಕ್ಕೆ 2ನೇ ಪತ್ನಿಯಿಂದಲೇ ಸಂಕಷ್ಟ: “ಎದ್ದೇಳು ಮಂಜುನಾಥ 2” ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ!

ಮಠ, ಎದ್ದೇಳು ಮಂಜುನಾಥ ಖ್ಯಾತ ನಿರ್ದೇಶಕ ಗುರುಪ್ರಸಾದ್‌ 2024 ನವೆಂಬರ್ 3ರಂದು ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದರು. 3 ತಿಂಗಳು ಕಳೆದ ಮೇಲೆ, ಎದ್ದೇಳು ಮಂಜುನಾಥ್ -2 ಚಿತ್ರ ಬಿಡುಗಡೆಗೆ ಸಜ್ಜಾಗಿರುವಾಗ ಗುರುಪ್ರಸಾದ್ ಅವರ ಕೊನೆಯ ಸಿನಿಮಾಗೆ ಸಂಕಷ್ಟ ಎದುರಾಗಿದೆ.

ಹೌದು ನಿರ್ದೇಶಕ ಗುರುಪ್ರಸಾದ್ ನಟಿಸಿ ನಿರ್ದೇಶನ ಮಾಡಿರುವ ಎದ್ದೇಳು ಮಂಜುನಾಥ್ 2 ಸಿನಿಮಾ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಮೈಸೂರು ರಮೇಶ್ ಮತ್ತು ರವಿ ದೀಕ್ಷಿತ್ ನಿರ್ಮಾಣ ಮಾಡಿದ ಸಿನಿಮಾ ನಾಳೆ(ಫೆ.21) ಬಿಡುಗಡೆಯಾಗಬೇಕಿತ್ತು. ಈ ಚಿತ್ರ ಬಿಡುಗಡೆಯಾಗದಂತೆ ಗುರುಪ್ರಸಾದ್‌ 2ನೇ ಪತ್ನಿ ಸುಮಿತ್ರಾ ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ.

ಸಿನಿಮಾದಲ್ಲಿ ಬಂದ ಲಾಭದಿಂದ ಶೇ.50 ರಷ್ಟು ಹಣವನ್ನು ಗುರುಪ್ರಸಾದ್ ಕುಟುಂಬಕ್ಕೆ ನೀಡುವುದಾಗಿ ಹೇಳಿದ್ದೆವು. ಆದರೆ ಬಿಡುಗಡೆಗೂ ಮುನ್ನ 4 ಲಕ್ಷ ರೂ.ಗೆ ಸುಮಿತ್ರಾ ಬೇಡಿಕೆ ಇಟ್ಟಿದ್ದಾರೆ. ಸುಮಿತ್ರಾಗೆ ಮುಂಗಡ ಹಣ ನೀಡದ್ದಕ್ಕೆ ತಡೆಯಾಜ್ಞೆ ತಂದಿದ್ದಾರೆ ಎಂದು ನಿರ್ಮಾಪಕ ರಮೇಶ್ ತಿಳಿಸಿದ್ದಾರೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow