ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ: ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ.
50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ. ಹೌದು ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ.
7 ಮಂದಿ ಬೌರಿಂಗ್ ಆಸ್ಪತ್ರೆಯಲ್ಲಿ ಹಾಗೂ 4 ಮಂದಿ ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರ್ಸಿಬಿ ಆಟಗಾರರನ್ನು ನೋಡೋ ಆಸೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆಗಮಿಸಿದ್ದರು. ಈ ವೇಳೆ ನಿಯತ್ರಂಣ ತಪ್ಪಿದೆ. ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ, ಬರೋಬ್ಬರಿ 11 ಮಂದಿ ಮೃತಪಟ್ಟಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






