ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ನಾಡಹಬ್ಬ ದಸರಾ ಜಂಬೂಸವಾರಿಗೆ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಇದೀಗ ಚಾಲನೆ ನೀಡಿದ್ದಾರೆ. ಇನ್ನು ದಸರಾವನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದ್ದು,
ಕಳೆದ 9 ದಿನಗಳಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ. 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಈ ವೇಳೆ ಅಭಿಮನ್ಯುಗೆ 09 ಆನೆಗಳು ಸಾಥ್ ನೀಡಿದವು. ಇನ್ನು ಜಂಬೂಸವಾರಿ ಸಾಗಿದ ರಸ್ತೆಯ ಇಕ್ಕೆಲಗಳಲ್ಲೂ ಜನರು ಕಿಕ್ಕಿರಿದು ತುಂಬಿದ್ರು. ಸಂಭ್ರಮದ ಜಂಬೂಸವಾರಿಯನ್ನು 4 ರಿಂದ 5 ಲಕ್ಷ ಜನರು ಕಣ್ತುಂಬಿಕೊಂಡರು.
ನಿಮ್ಮ ಪ್ರತಿಕ್ರಿಯೆ ಏನು?






