ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ: ಸಂಸದ ಡಾ.ಮಂಜುನಾಥ್

ಎಪ್ರಿಲ್ 14, 2025 - 15:59
 0  13
ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ: ಸಂಸದ ಡಾ.ಮಂಜುನಾಥ್

ರಾಮನಗರ: ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ ಎಂದು ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಹಾಗೂ ಶೈಕ್ಷಣಿಕ ಮಟ್ಟದ ಬಗ್ಗೆ ಸಮೀಕ್ಷೆ ಮಾಡಿ. ಆದರೆ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ.

ಎಲ್ಲರನ್ನೂ ಮೇಲೆತ್ತುವ ಕೆಲಸ ಆಗಬೇಕು. ಏಕಾಏಕಿ ಜಾತಿಗಣತಿ ಸ್ವೀಕಾರ ಮಾಡುವುದಕ್ಕಿಂತ ಮೊದಲು ಚರ್ಚೆ ಆಗಬೇಕು. ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ ಮಾಡಬೇಕು. ತಜ್ಞರು, ಚಿಂತಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.

ಶಾಸಕಾಂಗ ಸಮಿತಿ ರಚನೆ ಮಾಡಿ ಈ ಬಗ್ಗೆ ಪರಿಶೀಲನೆ ಮಾಡಬೇಕು. ಸರ್ಕಾರದ ಆತುರದ ನಿರ್ಧಾರ ಸರಿಯಲ್ಲ ಎಂದು ತಿಳಿಸಿದರು. ಇಂದು ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತಿದೆ. ನಮ್ಮ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳುತ್ತದೆ. ಇಂತಹ ಸಂದರ್ಭದಲ್ಲಿ ಜಾತಿಗಣತಿ ಯಾಕೆ ಬೇಕು ಎಂದು ಗೊತ್ತಾಗುತ್ತಿಲ್ಲ ಎಂದರು. 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow