ಟೀಮ್ ಇಂಡಿಯಾಗೆ ಶಾಕಿಂಗ್ ಸುದ್ದಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ನಿಂದ ಹೊರ ಬಿದ್ದ ದ್ರಾವಿಡ್ ಪುತ್ರ!

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ನಿಂದ ಕನ್ನಡಿಗ ದ್ರಾವಿಡ್ ಪುತ್ರ ಔಟ್ ಆಗಿದ್ದಾರೆ. ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕಾರಣಕ್ಕಾಗಿ ಸಮಿತ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದರು. ಆದರೀಗ, ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದ ಸಮಿತ್ ತೀವ್ರ ಗಾಯದಿಂದ ಇನ್ನೂ ಚೇತರಿಕೆ ಕಂಡಿಲ್ಲ. ಇದರ ಪರಿಣಾಮ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಸಮಿತ್ ಹೊರಬಿದ್ದಿದ್ದಾರೆ.
ಇನ್ನು, ಸಮಿತ್ ದ್ರಾವಿಡ್ ಅಲಭ್ಯತೆ ಬಗ್ಗೆ ಭಾರತ ಅಂಡರ್-19 ತಂಡದ ಹೆಡ್ ಕೋಚ್ ಹೃಷಿಕೇಶ್ ಕಾನಿಟ್ಕರ್ ಮಾತಾಡಿದ್ದಾರೆ. ಸಮಿತ್ ಪ್ರಸ್ತುತ ಎನ್ಸಿಎಯಲ್ಲಿದ್ದು, ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಅವನು ಸದ್ಯಕ್ಕೆ ಆಡುವುದು ಕಷ್ಟ ಎಂದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






