ತಡರಾತ್ರಿ ಗುಂಪುಗೂಡಿ ನಿಂತಿದ್ದನ್ನು ಪ್ರಶ್ನಿಸಿದ್ದಕ್ಕೆ BJP ನಾಯಕನಿಂದ PSI ಮೇಲೆ ಹಲ್ಲೆ..!?

ಮಾರ್ಚ್ 15, 2025 - 16:00
 0  16
ತಡರಾತ್ರಿ ಗುಂಪುಗೂಡಿ ನಿಂತಿದ್ದನ್ನು ಪ್ರಶ್ನಿಸಿದ್ದಕ್ಕೆ BJP ನಾಯಕನಿಂದ PSI ಮೇಲೆ ಹಲ್ಲೆ..!?

ಚಿತ್ರದುರ್ಗ: ತುಮಕೂರು ಜಿಲ್ಲೆ ಮದುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡರ ವಿರುದ್ಧ ಚಿತ್ರದುರ್ಗ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ತಡರಾತ್ರಿಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ ನಗರಠಾಣೆ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಅಲ್ಲದೇ ಹಲ್ಲೆ ವೇಳೆ ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಬೆರಳಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಆದ್ದರಿಂದ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಹನುಮಂತೇಗೌಡ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತ್ಯಕ್ಷದರ್ಶಿಯಾದ ಹನುಮಂತೇಗೌಡರ ಕಾರಿನ ಚಾಲಕ ರಂಗಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಊಟ ಮುಗಿಸಿ ಹೊರಡುವ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ನಮ್ಮ ಸಾಹೇಬರನ್ನು ಏಕವಚನ ಹಾಗೂ ಅವಾಚ್ಯ ಶಬ್ದದಿಂದ ನಿಂದಿಸಿದರು. ಆಗ ಪಿಎಸ್‌ಐಗೆ ನಮ್ಮ ಸಾಹೇಬರು ಕೂಡ ನಿಂದಿಸಿದ್ದು, ಪರಸ್ಪರ ಹಲ್ಲೆ ನಡೆಸಿದ ಪರಿಣಾಮ ಘಟನೆ ನಡೆಯಿತೆಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow