ತರಕಾರಿ ಖರೀದಿಸಲು ಹೋದ ಬಾಲಕಿಯ ಕಿಡ್ನಾಪ್:‌ ವಾರಗಳ ಕಾಲ ಅತ್ಯಾಚಾರ

ಮೇ 11, 2025 - 22:04
 0  20
ತರಕಾರಿ ಖರೀದಿಸಲು ಹೋದ ಬಾಲಕಿಯ ಕಿಡ್ನಾಪ್:‌ ವಾರಗಳ ಕಾಲ ಅತ್ಯಾಚಾರ

ಉತ್ತರ ಪ್ರದೇಶದ ಇಟಾವಾದಲ್ಲಿ 13 ವರ್ಷದ ಬಾಲಕಿಯನ್ನು ಅಪಹರಿಸಿ ದಿನಗಳ ಕಾಲ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಾಲಕಿ ತರಕಾರಿ ಖರೀದಿಸಲು ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

13 ವರ್ಷದ ಬಾಲಕಿಯೊಬ್ಬಳು ತರಕಾರಿ ಖರೀದಿಸಲು ಹೊರಗೆ ಹೋಗಿದ್ದಳು. ಅವಳು ಸ್ವಲ್ಪ ದೂರ ನಡೆದುಕೊಂಡು ಹೋದಾಗ, ಒಂದು ಕಾರು ಬಂದು ನಿಂತಿತು.

ಒಳಗೆ ಕುಳಿತಿದ್ದ ವ್ಯಕ್ತಿ ಯಾವುದೋ ವಿಳಾಸದ ಬಗ್ಗೆ ವಿಚಾರಿಸಿದ್ದಾನೆ. ಆಕೆ ಇನ್ನೇನು ಆತನಿಗೆ ವಿಳಾಸದ ಬಗ್ಗೆ ಹೇಳಬೇಕು ಎನ್ನುವಾಗ ಬಲವಂತವಾಗಿ ಎಳೆದು ಕಾರಿನಲ್ಲಿ ಕೂರಿಸಿಕೊಂಡಿದ್ದಾನೆ. ಸ್ವಲ್ಪ ದೂರ ಹೋದ ನಂತರ, ಅವನು ಒಂದು ಮೆಡಿಕಲ್ ಸ್ಟೋರ್‌ನಲ್ಲಿ ಕಾರನ್ನು ನಿಲ್ಲಿಸಿ, ಅಲ್ಲಿ ನೀರಿನ ಬಾಟಲಿ ಮತ್ತು ಕೆಲವು ಔಷಧಿಗಳನ್ನು ಖರೀದಿಸಿ, ಅದನ್ನು ನೀರಿಗೆ ಬೆರೆಸಿದ್ದ, ಆತ ತನಗೆ ಔಷಧಿ ಬೆರೆಸಿದ ನೀರನ್ನು ಕುಡಿಯಲು ಒತ್ತಾಯಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ.

ಶೀಘ್ರದಲ್ಲೇ ಆಕೆ ಪ್ರಜ್ಞೆ ತಪ್ಪಿದ್ದಳು, ಹೋಟೆಲ್​ಗೆ ಕರೆದೊಯ್ದಿದ್ದ, ಅಲ್ಲಿ ನನಗೆ ರೇಷ್ಮಾ ಎಂಬ ಹುಡುಗಿಯ ನಕಲಿ ಐಡಿ ನೀಡಿ ಅದಕ್ಕೆ ಸಹಿ ಹಾಕುವಂತೆ ಒತ್ತಾಯಿಸಿದ್ದ. ಸಹಿ ಹಾಕಿಲ್ಲವೆಂದರೆ ಮುಂದೂ ಕೂಡ ಇಂಥದ್ದೇ ಪರಿಸ್ಥಿತಿ ಎದುರಿಸಬೇಕಾಗಬಹುದು ಎಂದು ಬೆದರಿಕೆ ಹಾಕಿದ್ದಾಗಿ ಆಕೆ ತಿಳಿಸಿದ್ದಾಳೆ.

ಆರೋಪಿ ವಿಷ್ಣು ತನ್ನ ಸಹಚರ ನಾರಾಯಣ್‌ಗೆ ಕರೆ ಮಾಡಿ ಇಬ್ಬರೂ ಸೇರಿ ಬಾಲಕಿಯನ್ನು ದಾರಿ ಮಧ್ಯದಲ್ಲಿ ಇಳಿಸಿದರು. ಮತ್ತೊಬ್ಬ ವ್ಯಕ್ತಿ ಸಂಜಯ್ ಅವಳನ್ನು ಎತ್ತಿಕೊಂಡು ತನ್ನ ಮನೆಗೆ ಕರೆದೊಯ್ದಿದ್ದಾನೆ. ಆತ ತಂಪು ಪಾನೀಯ ಕೊಟ್ಟ ನಂತರ ತಲೆ ತಿರುಗಿಬಿದ್ದಿದ್ದಳು. ಮರುದಿನ ಬೆಳಿಗ್ಗೆ ಎಚ್ಚರಗೊಂಡು ನನ್ನ ಫೋನ್ ಕೇಳಿದೆ. ಅಲ್ಲಿಂದ ಅವನು ಆತ ತನ್ನ ಸಹೋದರನ ಮನೆಗೆ ಕರೆದೊಯ್ದು ತನ್ನ ಸಹೋದರನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ.

ಹುಡುಗಿಯ ತಂದೆ ತನ್ನ ಹೆಂಡತಿ ಮತ್ತು ಮಗನೊಂದಿಗೆ ದೆಹಲಿಯಲ್ಲಿ ವಾಸಿಸುತ್ತಿದ್ದರೆ, ಅವರ ಮಗಳು ತನ್ನ ಅಜ್ಜಿಯರೊಂದಿಗೆ ಹಳ್ಳಿಯಲ್ಲಿ ವಾಸಿಸುತ್ತಿದ್ದಾಳೆ. ತಮ್ಮ ಮಗಳು ಏಪ್ರಿಲ್ 26 ರಂದು ಕಾಣೆಯಾಗಿದ್ದಳು ಮತ್ತು ಮೇ 1 ರಂದು ಮಾತ್ರ ಪತ್ತೆಯಾಗಿದ್ದಳು, ಅಷ್ಟು ದಿನಗಳ ಕಾಲ ಆಕೆಯನ್ನು ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರವೆಸಗಲಾಗಿದೆ ಎಂದು ಆಕೆಯ ತಾಯಿ ಹೇಳಿದ್ದಾರೆ. 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow