ತಲೆ ಇಲ್ಲದ ಗಾಯಬ್ ಪೋಸ್ಟರ್ ವಿವಾದ: ಪ್ರಧಾನಿ ಗೌರವಕ್ಕೆ ಧಕ್ಕೆ ತರುವಂತ ಕೆಲಸ ಮಾಡಬಾರದು - ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಯಾವುದೇ ವ್ಯಕ್ತಿಗೆ, ಯಾರೇ ಇರಲಿ, ಅದು ಪ್ರಧಾನಮಂತ್ರಿಯೇ ಇರಲಿ, ಯಾವುದೇ ಮುಖಂಡರಿಗೇ ಇರಲಿ, ಅವರ ಗೌರವಕ್ಕೆ ಧಕ್ಕೆ ತರುವಂತ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೋದಿ ತಲೆ ಇಲ್ಲದ ಫೋಟೋ ಹಾಕಿ ಗಾಯಬ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,
ಆ ವಿಚಾರ ನನಗೆ ಗೊತ್ತಿಲ್ಲ. ಯಾವುದೇ ವ್ಯಕ್ತಿಗೆ, ಯಾರೇ ಇರಲಿ, ಅದು ಪ್ರಧಾನಮಂತ್ರಿಯೇ ಇರಲಿ, ಯಾವುದೇ ಮುಖಂಡರಿಗೇ ಇರಲಿ, ಅವರ ಗೌರವಕ್ಕೆ ಧಕ್ಕೆ ತರುವಂತ ಕೆಲಸ ಮಾಡಬಾರದು. ಅವರಾಗಲಿ ನಮ್ಮವರೇ ಆಗಲಿ ಈ ರೀತಿ ಮಾಡೋದು ಸರಿಯಲ್ಲ ಎಂದು ತಿಳಿಸಿದರು.
ಪಹಲ್ಗಾಮ್ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡದಂತೆ ಕೈ ನಾಯಕರಿಗೆ ಸೂಚನೆ ವಿಚಾರವಾಗಿ ಮಾತನಾಡಿದ ಅವರು, ಅದರ ಸುತ್ತೋಲೆ ಹೊರಡಿಸಿದ್ದೇವೆ. ದೆಹಲಿಯಲ್ಲಿ ವರ್ಕಿಂಗ್ ಕಮಿಟಿ ಸಭೆ ಮಾಡಿದ್ದೆವು.
ವರ್ಕಿಂಗ್ ಕಮಿಟಿಯಲ್ಲಿ ನಿರ್ಣಯ ತೆಗೆದುಕೊಂಡಿದ್ದೆವು. ಆ ನಿರ್ಣಯವನ್ನ ಎಲ್ಲರೂ ಪಾಲಿಸಬೇಕು. ಇದನ್ನ ಮತ್ತೊಮ್ಮೆ ಅವರಿಗೆ ಮನವರಿಕೆ ಮಾಡಿದ್ದೇವೆ. ಎಲ್ಲರೂ ಅದನ್ನು ಫಾಲೋ ಮಾಡಬೇಕು ಎಂದು ಸೂಚನೆ ನೀಡಿದರು.
ನಿಮ್ಮ ಪ್ರತಿಕ್ರಿಯೆ ಏನು?






