ತವರು ಮನೆಗೆ ಹಣ ಕಳಿಸಿ ರಾಬರಿ ನಾಟಕವಾಡಿದ್ದ ಪಿಎಸ್ಐ ಪತ್ನಿಯ ಮೇಲೆ ಕೇಸ್.

ತವರು ಮನೆಗೆ ಹಣ ಕಳುಹಿಸಿ, ದರೋಡೆಯಾಗಿದೆ ಎಂದು ನಾಟಕವಾಡಿದ್ದ ಪಿಎಸ್ಐ ಪತ್ನಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿರುವ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.
ಅಶೋಕನಗರ ಠಾಣಾ ಪಿಎಸ್ಐ ಆಗಿರುವ ಪುಟ್ಟಸ್ವಾಮಿ ಅವರ ಮನೆಯಲ್ಲಿ 12 ಲಕ್ಷ ಹಣ ಹಾಗೂ ಚಿನ್ನಾಭರಣ ರಾಬರಿ ಆಗಿದೆ ಎಂದು ಜು.11 ರಂದು ದೂರು ಬಂದಿತ್ತು. ಪುಟ್ಟಸ್ವಾಮಿ ಪತ್ನಿ ಹಾಗೂ ಪತ್ನಿ ಸಹೋದರ ನೀಡಿದ ದೂರಿನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಇದೀಗ, ಪೊಲೀಸರು ಅಡಿಷನಲ್ ಕಮಿಷನರ್ ನೇತೃತ್ವದಲ್ಲಿ ಹಲವು ದಿನಗಳ ಕಾಲ ತನಿಖೆ ನಡೆಸಿ ಇದೊಂದು ಸುಳ್ಳು ರಾಬರಿ ಪ್ರಕರಣ ಎಂದು ವರದಿ ನೀಡಿದ್ದಾರೆ. ಪಿಎಸ್ಐ ಪತ್ನಿ ಹಣ ಮತ್ತು ಚಿನ್ನಾಭರಣವನ್ನ ತವರು ಮನೆಗೆ ನೀಡಿ, ಗಂಡನಿಂದ ವಿಷಯ ಮರೆಮಾಚಲು ಈ ರೀತಿ ರಾಬರಿ ಕತೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






