ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ಬೇಡವೆಂದ ವಧು: ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ

ಮೇ 23, 2025 - 14:00
 0  15
ತಾಳಿ ಕಟ್ಟುವ ಹೊತ್ತಲ್ಲಿ ಮದುವೆ ಬೇಡವೆಂದ ವಧು: ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ

ಹಾಸನ: ಹೆಣ್ಣು ನೋಡುವಲ್ಲಿಂದ ಹಿಡಿದು ಇನ್ನೇನು ತಾಳಿ ಕಟ್ಟುವವರೆಗಿನ ಎಲ್ಲಾ ಶಾಸ್ತ್ರ, ಸಿದ್ಧತೆಗಳು ನಡೆದ ಬಳಿಕ ಮಂಟಪದಲ್ಲಿಯೇ ಕೆಲವೊಂದು ಮದುವೆಗಳು ಮುರಿದುಬಿದ್ದ ಪ್ರಸಂಗಗಳನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ತಾಳಿಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ವಧು ಹೊರ ನಡೆದಿರುವಂತಹ ಘಟನೆ ನಗರದ ಶ್ರೀಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆಂದು ವಧು ಮದುವೆ ನಿರಾಕರಿಸಿದ್ದಾರೆ. ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಮುಹೂರ್ತದ ವೇಳೆ ಪ್ರಿಯಕರನಿಂದ ಯುವತಿಗೆ ದೂರವಾಣಿ ಕರೆ ಬಂದಿದ್ದು, ತಕ್ಷಣವೇ ಮದುವೆ ಬೇಡ ಎಂದು ಯುವತಿ ನಿರಾಕರಿಸಿದ್ದಾರೆ.

ತಕ್ಷಣವೇ ಮದುವೆ ಬೇಡ ಎಂದು ಪಲ್ಲವಿ ಕೊಠಡಿಗೆ ಹೋಗ ಬಾಗಿಲು ಹಾಕಿಕೊಂಡಿದ್ದಾಳೆ. ಪಲ್ಲವಿಯ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟಿದ್ದಾರೆ. ವಿಚಾರ ತಿಳಿದು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ.  ಪೋಷಕರ ಮನವೊಲಿಕೆಗೂ ಕ್ಯಾರೇ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ.

 ಯುವತಿ ಹಠವನ್ನು ನೋಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವೇಣುಗೋಪಾಲ ನನಗೂ ಮದುವೆ ಬೇಡ ಎಂದು ಹೇಳಿದ್ದಾರೆ. ಕಲ್ಯಾಣಮಂಟಪಕ್ಕೆ ವಧು-ವರನ ಕಡೆಯ ನೂರಾರು ಮಂದಿ ಆಗಮಿಸಿದ್ದರು. ಕಡೆ ಗಳಿಗೆಯಲ್ಲಿ ಮದುವೆ ನಿಂತು ಹೋಗಿದ್ದಕ್ಕೆ ವಧುವಿನ ಪೋಷಕರು ಕಣ್ಣೀರಿಟ್ಟಿದ್ದಾರೆ.   

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow