ದಾಸನಿಗೆ ತಪ್ಪದ ಸಂಕಷ್ಟ: ದರ್ಶನ್ ಬೆನ್ನತ್ತಿದ IT ಅಧಿಕಾರಿಗಳು!

ಸೆಪ್ಟೆಂಬರ್ 25, 2024 - 18:04
 0  14
ದಾಸನಿಗೆ ತಪ್ಪದ ಸಂಕಷ್ಟ: ದರ್ಶನ್ ಬೆನ್ನತ್ತಿದ IT ಅಧಿಕಾರಿಗಳು!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವಹಿವಾಟು ಕೂಡ ನಡೆದಿದೆ ಎನ್ನಲಾಗಿದೆ. ಹೀಗಾಗಿ, ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಈ ಕೇಸ್​ನಲ್ಲಿ ದರ್ಶನ್ ಅವರ ವಿಚಾರಣೆ ನಡೆಯಲಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

ಗುರುವಾರ  ಅಥವಾ ಶುಕ್ರವಾರ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬರಲಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್​ನ ವಿಚಾರಣೆ ಮಾಡಲಿದ್ದಾರೆ. ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ನ್ಯಾಯಾಲಯದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇ-ಮೇಲ್ ರವಾನೆ ಆಗಿದೆ.

ಕೊಲೆ ಆರೋಪ ಮತ್ತೊಬ್ಬರ ಮೇಲೆ ಹೊರಿಸಲು ದರ್ಶನ್ ಪ್ಲ್ಯಾನ್ ಮಾಡಿದ್ದರು. ಇದಕ್ಕಾಗಿ ಲಕ್ಷ ಲಕ್ಷ ಹಣ ಖರ್ಚು ಮಾಡಿದ್ದರು. ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲಾಧಿಕಾರಿಗಳು ಖಚಿತಪಡಿಸಿದ್ದಾರೆ.

ದರ್ಶನ್ ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದರ ವಿಚಾರಣೆ ಸೆಪ್ಟೆಂಬರ್ 27ರಂದು ಕೋರ್ಟ್​ನಲ್ಲಿ ನಡೆಯಲಿದೆ. ಈ ಪ್ರಕರಣದಲ್ಲಿ ಅವರು ಜಾಮೀನು ನಿರೀಕ್ಷೆಯಲ್ಲಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ. ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ಅವರು ಉತ್ತರ ನೀಡಬೇಕಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow