“ದಾಸ”ನಿಗೆ ಮತ್ತೆ ನಿರಾಸೆ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನ.28ಕ್ಕೆ ಮುಂದೂಡಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ. ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಪ್ರಬಲ ವಾದ ಮಂಡಿಸಿದ್ದು, ದರ್ಶನ್ ವಿರುದ್ಧ ಕಿಡ್ನ್ಯಾಪ್, ಕೊಲೆ ಆರೋಪ ಹೊರಿಸಲಾಗಿದೆ. ಆದರೆ, ರೇಣುಕಾಸ್ವಾಮಿ ಅಪಹರಣ ನಡೆದಿಲ್ಲ. ಆತ ಸ್ವ ಇಚ್ಛೆಯಿಂದಲೇ ಬಂದಿದ್ದಾನೆ. ಆತನನ್ನು ಬಲವಂತವಾಗಿ ಕರೆದುಕೊಂಡು ಬಂದಿಲ್ಲ ಎಂದು ಹೇಳಿದರು.
ಯಾವುದೇ ಮೋಸದಿಂದ ಅಥವಾ ಬಲವಂತದಿಂದ ರೇಣುಕಾಸ್ವಾಮಿ ಕಿಡ್ನ್ಯಾಪ್ ಮಾಡಲಾಗಿಲ್ಲ ಎಂಬ ವಿಚಾರವನ್ನು ವಕೀಲರು ಒತ್ತಿ ಒತ್ತಿ ಹೇಳಿದ್ದಾರೆ. ಅಲ್ಲದೆ ದರ್ಶನ್ ಹಾಗೂ ಇತರರಿಗೆ ರೇಣುಕಾ ಸ್ವಾಮಿಯ ಕೊಲ್ಲುವ ಉದ್ದೇಶ ಇರಲಿಲ್ಲ ಎಂದು ವಾದಿಸಿದರು. ಆ ಬಳಿಕ ಸಮಯದ ಅಭಾವದಿಂದಾಗಿ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿಕೆ ಮಾಡಿದರು.
ನಿಮ್ಮ ಪ್ರತಿಕ್ರಿಯೆ ಏನು?






