ದೆಹಲಿಯಲ್ಲಿ ಭೀಕರ ಕಾಲ್ತುಳಿತ: ಮಕ್ಕಳು ಸೇರಿ 18 ಮಂದಿ ಸಾವು!

ಫೆಬ್ರವರಿ 16, 2025 - 09:38
 0  11
ದೆಹಲಿಯಲ್ಲಿ ಭೀಕರ ಕಾಲ್ತುಳಿತ: ಮಕ್ಕಳು ಸೇರಿ 18 ಮಂದಿ ಸಾವು!

ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ತೀವ್ರವಾಗಿ ಕಾಲ್ತುಳಿತ ಉಂಟಾಗಿದೆ. ಹಠಾತ್ ನೂಕುನುಗ್ಗಲು ಉಂಟಾದ ಕಾರಣ ನಾಲ್ವರು ಮಕ್ಕಳು ಸೇರಿ 18 ಮಂದಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ಹರಸಾಹಸ ಪರಿಸ್ಥಿತಿಯನ್ನು ನಿಯಂತ್ರಿಸಿದ್ರು. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಳೆದ ರಾತ್ರಿ ದೆಹಲಿಯಿಂದ ಪ್ರಯಾಗ್ ರಾಜ್ಗೆ ತೆರಳಲು ಎರಡು ವಿಶೇಷ ರೈಲುಗಳನ್ನ ರೈಲ್ವೆ ಇಲಾಖೆ ನಿಗದಿ ಮಾಡಿತ್ತು. ಅದರಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಜನರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಪ್ರಯಾಗ್ರಾಜ್‌ಗೆ ತೆರಳುವ ರೈಲುಗಳನ್ನು ಹತ್ತಲು ಕಾಯುತ್ತಿದ್ರು. ಈ ಸಂದರ್ಭದಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಜನಸಂದಣಿ ತೀವ್ರವಾಗಿದ್ದು ನೂಕುನುಗ್ಗಲು ಉಂಟಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow