ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಇನ್ನಿಲ್ಲ

ಅಕ್ಟೋಬರ್ 10, 2024 - 07:48
 0  11
ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ಇನ್ನಿಲ್ಲ

ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಬೃಹತ್ ಉದ್ಯಮಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬುಧವಾರ ರಾತ್ರಿ ನಿಧನರಾದರು.

ಡಿಸೆಂಬರ್ 28, 1937ರಂದು ಜನಿಸಿದ ರತನ್ ಟಾಟಾ, ಮುಂಬೈನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ್ದರು. ಆ ನಂತರ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಅವರು, ಕಾರ್ನೆಲ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದರು. ಭಾರತಕ್ಕೆ ಹಿಂದಿರುಗಿದ ಅವರು ಟಾಟಾ ಸಮೂಹವನ್ನು ಹಂತಹಂತವಾಗಿ ಮಾದರಿ ಉದ್ಯಮ ಸಂಸ್ಥೆಯಾಗಿ ಬೆಳೆಸಿದ್ದರು.

ರತನ್ ಟಾಟಾ ಅವರು 2012 ರವರೆಗೆ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನೆಡೆಸಿ, ನಿವೃತ್ತಿಯಾಗಿದ್ದರು. ಆ ಬಳಿಕ 2016 ರಿಂದ 2017ರ ಫೆಬ್ರವರಿವರೆಗೆ ಹಂಗಾಮಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವಿವಾಹಿತರಾಗಿದ್ದ ಅವರು, ಟಾಟಾದ ಚಾರಿಟಬಲ್ ಟ್ರಸ್ಟ್‌ಗಳ ಮೂಲಕ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿದ್ದರು. ಭಾರತದ ಅತ್ಯುನ್ನತ ನಾಗರಿಕ ಗೌರವಗಳಾದ ಪದ್ಮ ವಿಭೂಷಣ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಪಡೆದಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow