ನಟ ದರ್ಶನ್ ಗೆ ತಪ್ಪದ ಸಂಕಷ್ಟ: ಹಳೇ ಕೇಸ್ ಗೆ ಮತ್ತೆ ಮರುಜೀವ; ಕಂಪ್ಲೀಟ್ ಸ್ಟೋರಿ ಇಲ್ಲಿದೆ!

ಅಕ್ಟೋಬರ್ 18, 2024 - 15:04
 0  32
ನಟ ದರ್ಶನ್ ಗೆ ತಪ್ಪದ ಸಂಕಷ್ಟ: ಹಳೇ ಕೇಸ್ ಗೆ ಮತ್ತೆ ಮರುಜೀವ; ಕಂಪ್ಲೀಟ್ ಸ್ಟೋರಿ ಇಲ್ಲಿದೆ!

ಬೆಂಗಳೂರು:- ಮೊದಲೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಸಧ್ಯ ಈ ಕೇಸ್ ನಿಂದ ಪಾರಾಗೋದು ಹೇಗೆ ಅಂತ ಯೋಚ್ನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ನಟನನ್ನು ಬಹಳ ಹಿಂದಿನ ಕೇಸ್ ಇದೀಗ ಕಾಡುತ್ತಿದೆ. 

ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದ. ಆದರೆ ಕೋವಿಡ್ ಕಾರಣದಿಂದಾಗಿ ಅರ್ಧಕ್ಕೆ ಸಿನಿಮಾ ನಿಂತುಹೋಗಿತ್ತು. ಈ ವಿಚಾರವಾಗಿ ನಟ ಧೃವನ್, ದರ್ಶನ್ ಬಳಿ ಹೋಗಿದ್ದ. ಈ ವೇಳೆ ದರ್ಶನ್‌ನಿಂದ ಭರತ್‌ಗೆ ಕರೆ ಮಾಡಿಸಿದ್ದ. ಆಗ ದರ್ಶನ್ `ನೀನೆ ಇರೋದಿಲ್ಲ’ ಎಂದು ಭರತ್‌ಗೆ ಬೆದರಿಕೆ ಹಾಕಿದ್ದರು.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಸಿನಿಮಾ ವಿಚಾರವಾಗಿ ಧೃವನ್, ನಟ ದರ್ಶನ್ ಬಳಿ ಹೋಗಿ ಬೆದರಿಕೆ ಹಾಕಿಸಿದ್ದಾನೆ ಎಂದು ನಿರ್ಮಾಪಕ ಭರತ್ ದೂರು ದಾಖಲಿಸಿದ್ದರು. 2022ರ ಆ.5 ರಂದು ಧೃವನ್ ಮೇಲೆ ಎನ್‌ಸಿಆರ್ ದಾಖಲಾಗಿತ್ತು. ಆ ವೇಳೆ ಬೆದರಿಕೆ ಹಾಕಿದ್ದ ವಿಚಾರವಾಗಿ ದರ್ಶನ್ ವಿರುದ್ಧ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೆ ದರ್ಶನ್ ಮತ್ತು ಧೃವನ್ ಮೇಲೆ ಕೆಂಗೇರಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಹಾಗೂ ನೋಟಿಸ್ ಕೂಡ ಕೊಟ್ಟಿರಲಿಲ್ಲ.

ಇದೀಗ ಬೆದರಿಕೆ ಕೇಸ್ ಅಡಿಯಲ್ಲಿ ಆರೋಪಿ ಧೃವನ್ ಅಲಿಯಾಸ್ ಸೂರಜ್ ಕುಮಾರ್, ನಟ ದರ್ಶನ್, ದರ್ಶನ್ ಮ್ಯಾನೇಜರ್ ನಾಗರಾಜ್ ವಿರುದ್ಧ ಮತ್ತೆ ಎನ್‌ಸಿಆರ್ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow