ನಡುರಸ್ತೆಯಲ್ಲೇ ಪಲ್ಟಿ ಹೊಡೆದ KSRTC ಬಸ್: 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ!

ಮಂಡ್ಯ:- ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಭಯಾನಕವಾಗಿ ಪಲ್ಟಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ಕಡೆಯಿಂದ ಮಂಡ್ಯ ಕಡೆಗೆ ಕೆಎಸ್ಆರ್ಟಿಸಿ ಬಸ್ ಹೋಗುತ್ತಿತ್ತು. ಈ ವೇಳೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಬಸ್ ಅನ್ನು ಎಕ್ಸ್ಪ್ರೆಸ್ ವೇಯಿಂದ ಸರ್ವೀಸ್ ರಸ್ತೆ ಕಡೆಗೆ ಹೋಗುವಾಗ ಬಸ್ ಪಲ್ಟಿಯಾಗಿದೆ. ಪಲ್ಟಿ ಆಗುವಾಗ ಅಲ್ಲೇ ನಿಂತಿದ್ದ ಕಂಟೈನರ್ಗೂ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಂಟೈನರ್ ಡ್ಯಾಮೇಜ್ ಆಗಿದ್ದು ಬಸ್ಗೂ ಹಾನಿ ಯಾಗಿದೆ. ಬಸ್ನ ಮುಂಭಾಗವೆಲ್ಲ ಫುಲ್ ನಜ್ಜುಗುಜ್ಜಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






