ನನ್ನಿಂದ ತಪ್ಪಾಗಿದ್ದರೆ ಅಥವಾ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ: CJI ಚಂದ್ರಚೂಡ್

ನವದೆಹಲಿ: ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಸಹದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ ಅರಿವಿಗೆ ಬಾರದಂತೆ ಎಷ್ಟೋ ಜನರನ್ನು ಭೇಟಿಯಾಗಿರುತ್ತೇವೆ. ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.
ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ಹೇಳಿದ್ದಾರೆ. ಮುಂದಿನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ವಿಚಾರವಾಗಿ, ಅವರು ತುಂಬಾ ಗಟ್ಟಿಯಾದ ವ್ಯಕ್ತಿಯಾಗಿದ್ದಾರೆ. ನ್ಯಾಯಕ್ಕೆ ಬದ್ಧರಾಗಿದ್ದಾರೆ ಎಂದು ಸಂತೋಷದಿಂದ ನಿರ್ಗಮಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






