ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ: ಸುಮಲತಾ ಅಂಬರೀಶ್

ನವೆಂಬರ್ 9, 2024 - 22:21
 0  12
ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ: ಸುಮಲತಾ ಅಂಬರೀಶ್

ಮಂಡ್ಯ: ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಸೂಚನೆ ಬಂದರೆ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ.

ಮಂಡ್ಯದಲ್ಲಿ ಕೆಲವು ವಿಚಾರಗಳು ಸರಿಹೋಗಬೇಕು. ರಾಜ್ಯ ನಾಯಕರು ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಇನ್ನು ಗಮನ ಕೊಟ್ಟಿಲ್ಲ. ಕೆಳ ಹಂತದಿಂದ ಪಕ್ಷ ಸಂಘಟನೆ ಮಾಡಿದರೆ ಮುಂದೆ ಚುನಾವಣೆ ‌ಎದುರಿಸಬಹುದು ಎಂದರು.

ಮಂಡ್ಯದಲ್ಲಿ ಪಕ್ಷ ಬಲಪಡಿಸಬೇಕು ಎಂದು ಈಗಾಗಲೇ ಹೈಕಮಾಂಡ್​ಗೆ ಹೇಳಿದ್ದೇನೆ. ಹೆಚ್ಚು ಸಕ್ರೀಯವಾಗಿ ಇಲ್ಲ. ನನ್ನ ಅಸಮಾಧಾನವನ್ನ ತಿಳಿಸಿದ್ದೇನೆ. ಮೈತ್ರಿ ಇದ್ದಾಗ ಪಕ್ಷ ಸಂಘಟನೆ ಒಂದು ಚಾಲೆಂಜ್​. ಚುನಾವಣೆ ನಂತರ ಈ ಕಡೆ ಗಮನಹರಿಸುತ್ತಾರೆ. ನಾನು ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡಿಲ್ಲ. ಬೆಂಬಲಿಗರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನನ್ನ ರಾಜಕಾರಣ ಮಂಡ್ಯದಲ್ಲಿ ಇರುತ್ತದೆ ಎಂದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow