ನವಜೋಡಿಯ ದುರಂತ ಅಂತ್ಯ: ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣ!

ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ನವಜೋಡಿ ದುರಂತ ಅಂತ್ಯ ಕಂಡಿದ್ದು, ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣ ಹೊಂದಿದ್ದಾರೆ.
ಇಂದು ಬೆಳಗ್ಗೆ ಬಿಜ್ನೋರ್ನಲ್ಲಿ ಭಾರೀ ಮಂಜು ಕವಿದ್ದಿತ್ತು. ಈ ವೇಳೆ ಮದುವೆ ಮುಗಿಸಿ ಬರುತ್ತಿದ್ದವರ ವಾಹನ ವೇಗವಾಗಿ ಬಂದು ಟೆಂಪೋಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆ ಜಾರ್ಖಂಡ್ನಲ್ಲಿ ಮದುವೆ ಸಂಭ್ರಮ ನಡೆದಿತ್ತು. ಬಿಜ್ನೋರ್ನ ಧಂಪುರದಲ್ಲಿರುವ ವರನ ಮನೆಗೆ ಹಿಂದಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ಅವರಿದ್ದ ವಾಹನ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಹಳ್ಳಕ್ಕೆ ಬಿದ್ದಿವೆ.
ವಾಹನದಲ್ಲಿ ವಧು, ವರ, ಅವರ ಚಿಕ್ಕಮ್ಮ ಮತ್ತು ಅವರ ಸಹೋದರ ಸೇರಿದಂತೆ 11 ಮಂದಿ ಇದ್ದರು ಎಂದು ಹೇಳಲಾಗಿದೆ. ಅಪಘಾತದಲ್ಲಿ ದಂಪತಿಗಳು ಮತ್ತು ಅವರ ನಾಲ್ವರು ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ದಟ್ಟ ಮಂಜಿನಿಂದಾಗಿ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸುತ್ತಿರಲಿಲ್ಲ ಆ ಕಾರಣದಿಂದಲ್ಲೇ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






