ನಾನು ಸ್ನೇಹ ಕ್ಕೂ ಸಿದ್ದ,‌ ಸಮರಕ್ಕೂ ಸಿದ್ದ. ನನ್ನ ಬಗ್ಗೆ ‌ನಿನಗಿನ್ನೂ ಗೊತ್ತಿಲ್ಲ: ಸುಧಾಕರ್‌ ವಿರುದ್ಧ ವಿಶ್ವನಾಥ್‌ ಗುಡುಗು

ಜನವರಿ 30, 2025 - 18:02
 0  19
ನಾನು ಸ್ನೇಹ ಕ್ಕೂ ಸಿದ್ದ,‌ ಸಮರಕ್ಕೂ ಸಿದ್ದ. ನನ್ನ ಬಗ್ಗೆ ‌ನಿನಗಿನ್ನೂ ಗೊತ್ತಿಲ್ಲ: ಸುಧಾಕರ್‌ ವಿರುದ್ಧ ವಿಶ್ವನಾಥ್‌ ಗುಡುಗು

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದೆ, ಮನೆಯೊಂದು ಮೂರು ಬಾಗಿಲು ಎಂಬ ಗಾಧೆ ಮಾತಿದೆ. ಆದ್ರೆ, ರಾಜ್ಯ ಬಿಜೆಪಿಯಲ್ಲಿ ಮನೆಯೊಂದು ಹಲವು ಭಾಗಿಲಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಈ ನಡುವೆ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣಗಳ ನಡುವೆ ನಡುವೆ ಆಗಾಗ ಪರ ವಿರೋಧ ಹೇಳಿಕೆಗಳು ನಡೆಯುತ್ತಲೇ ಇವೆ, ಇದೀಗ ಸಂಸದ ಡಾ.ಕೆ ಸುಧಾಕರ್‌ ವಿರುದ್ಧ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಗುಡುಗಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮಾತನಾಡಿದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಸನ್ಮಾನ್ಯ, ಗೌರವಾನ್ವಿತ ಸಂಸದ ಡಾ. ಸುಧಾಕರ್ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಬಗ್ಗೆ ಬಹಳ ಕೇವಲವಾಗಿ ಮಾತಾಡಿದ್ದಾರೆ. ಅವರು ಮಾತಾಡಿರುವುದು ನಮಗೆ ಹಿಡಿಸಿಲ್ಲ. ಏನೇ ಇದ್ದರೂ ರಾಜ್ಯಾಧ್ಯಕ್ಷರ ಜೊತೆ ಮಾತಾಡಬಹುದಿತ್ತು.

ಪರೋಕ್ಷವಾಗಿ ನನ್ನ ಕ್ಷೇತ್ರದ ಬಗ್ಗೆಯೂ ಮಾತಾಡಿದ್ದಾರೆ. ನಾನೇನು ದಡ್ಡ ಅಲ್ಲ. ಸುಧಾಕರ್ ನನ್ನಿಂದಲೇ ಸರ್ಕಾರ ರಚನೆ ಆಯಿತು ಎಂದು ಹೇಳಿದ್ದಾರೆ. 17 ಶಾಸಕರು ಬಂದಾಗ ಕೊನೆಯದಾಗಿ ಮೆಜಾರಿಟಿ ಆದ ಬಳಿಕ ಬಂದವರು ಸುಧಾಕರ್ ಎಂದು ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ ಸುಧಾಕರ್ ಮೇಲೆ ಹಲ್ಲೆ ಆದಾಗ ರಕ್ಷಣೆ ಮಾಡಿ ಮನೆಗೆ ಕರೆದುಕೊಂಡು ಹೋಗಿ ಬಿಟ್ಟವನು ನಾನು. ಸಮರ್ಥ ಸಚಿವರಾಗಿದ್ದೂ ಸಾಕಷ್ಟು ಅನುದಾನ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹಾಕಿದರೂ ಯಾಕೆ ನೀವು ಸೋತಿರಿ? ನಿಮಗೆ ಅಸಮಾಧಾನ ಇರಬಹುದು. ಆದರೆ ವಿಜಯೇಂದ್ರ‌ ಬಗ್ಗೆ ಬಹಿರಂಗವಾಗಿ ಮಾತಾಡಿದ್ರಿ?

 ನನಗೂ ವಿಜಯೇಂದ್ರ‌ ಬಗ್ಗೆ ಸಣ್ಣ ಪುಟ್ಟ ಅಸಮಾಧಾನ ಇದ್ದರೂ ನಾನು ಎಲ್ಲೂ ಹೊರಗೆ ಮಾತಾಡಿಲ್ಲ. ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ‌ನಿಂದ ನಿಲ್ಲುವ ಬಗ್ಗೆ ಮಾತಾಡಿದ್ದು ಸುಳ್ಳಾ? ಎಲ್ಲಿ ಪ್ರಮಾಣ ಮಾಡಬೇಕು ಹೇಳಿ ಬನ್ನಿ ನಾನು ಬರುತ್ತೇನೆ ಎಂದು ಸವಾಲು ಹಾಕಿದರು. ನಾನು ಸ್ನೇಹ ಕ್ಕೂ ಸಿದ್ದ,‌ ಸಮರಕ್ಕೂ ಸಿದ್ದ. ನನ್ನ ಬಗ್ಗೆ ‌ನಿನಗಿನ್ನೂ ಗೊತ್ತಿಲ್ಲ ಎಂದು ವಿಶ್ವನಾಥ್ ಅವರು ಸುಧಾರಕ್ ವಿರುದ್ಧ ವಾಗ್ದಾಳಿ ನಡೆಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow