ನಿಮಗೆ ಶುಗರ್ ಇದ್ಯಾ? ದಿನಾಲೂ ಈ ತರಕಾರಿ ತಿನ್ನಿ ಸಾಕು ಕಂಟ್ರೋಲ್’ನಲ್ಲಿ ಇರುತ್ತೆ..!

ಜೂನ್ 2, 2025 - 07:00
 0  9
ನಿಮಗೆ ಶುಗರ್ ಇದ್ಯಾ? ದಿನಾಲೂ ಈ ತರಕಾರಿ ತಿನ್ನಿ ಸಾಕು ಕಂಟ್ರೋಲ್’ನಲ್ಲಿ ಇರುತ್ತೆ..!

ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿದೆ. ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಈ ಸಮಸ್ಯೆಯಿರುವವರಲ್ಲಿ ರೋಗನಿರೋಧಕ ಶಕ್ತಿಯನ್ನು ಕಡಿಮೆ ಇದೆ.

ಇದರ ಪರಿಣಾಮ ದೇಹದ ವಿವಿಧ ಅಂಗಗಳ ಕಾರ್ಯನಿರ್ವಹಣೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪ್ರಸ್ತುತ ಜೀವನಶೈಲಿಯಿಂದಾಗಿ ಅನೇಕ ಮಂದಿಯಲ್ಲಿ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ.

ಒಂದು ಬಾರಿ ಮಧುಮೇಹ ಸಮಸ್ಯೆಗೆ ನಾವು ಒಳಗಾದರೆ, ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ. ಆದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆದರೆ ಇವುಗಳನ್ನು ಸಾಧಿಸಲು ಆಹಾರದ ಬಗ್ಗೆ ಜಾಗರೂಕತೆ ವಹಿಸಬೇಕು.

 

ಸೌತೆಕಾಯಿ ಮಧುಮೇಹಿಗಳಿಗೆ ಎಷ್ಟು ಸಹಕಾರಿ?

* ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೂತ್ರ ವಿಸರ್ಜನೆಯ ಸಮಸ್ಯೆಯೂ ಹೆಚ್ಚಾಗಿ ಕಾಡುತ್ತದೆ. ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಹೀಗಾಗಿ ಸೌತೆಕಾಯಿಯಲ್ಲಿ ನಿಯಮಿತವಾದ ಸೇವನೆಯೂ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ.

* ಸಾಮಾನ್ಯವಾಗಿ ತೂಕ ಹೆಚ್ಚಾಗುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಹೀಗಾಗಿ ಸೌತೆಕಾಯಿಯನ್ನು ಸೇವಿಸುವುದರಿಂದ ಬೊಜ್ಜು ನಿವಾರಣೆಯಾಗಿ ತೂಕವನ್ನು ನಿಯಂತ್ರಿಸುತ್ತದೆ. ಒಂದು ವೇಳೆ ದೇಹದಲ್ಲಿ ಬೊಜ್ಜು ಹೆಚ್ಚಾದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆಯಿದ್ದು, ತರಕಾರಿಯೂ ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಇದರ ನಿಯಮಿತ ಸೇವನೆಯೂ ದೇಹಕ್ಕೆ ಶಕ್ತಿಯನ್ನು ನೀಡುವುದರೊಂದಿಗೆ ದೀರ್ಘಕಾಲದ ಕಾಯಿಲೆಗಳ ಅಪಾಯ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಫೈಬರ್ ಪ್ರಮಾಣವು ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಆಹಾರವನ್ನು ಜೀರ್ಣಗೊಳಿಸಿ ಹೊಟ್ಟೆಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.

* ಮದುಮೇಹಿಗಳಲ್ಲಿ ಕಣ್ಣಿನ ಸಮಸ್ಯೆಯೂ ಹೆಚ್ಚಿರುತ್ತದೆ. ಆದರೆ ಸೌತೆಕಾಯಿಯಲ್ಲಿ ವಿಟಮಿನ್ ಸಮೃದ್ಧವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಕಣ್ಣಿನ ದೃಷ್ಟಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow