ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಇದುವರೆಗೂ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ. ಹೆಣ್ಣೂರು ಪೊಲೀಸರು ಸದ್ಯ ಆರೋಪಿಯನ್ನ ಬಂಧಿಸಿದ್ದಾರೆ.
ಕಾಂಟ್ರಾಕ್ಟರ್ ಮುನಿಯಪ್ಪನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿಯಪ್ಪ 4ನೇ ಮಹಡಿವರೆಗೆ ಕಟ್ಟಡ ನಿರ್ಮಾಣ ಮಾಡಿದ್ದ. ಹೀಗಾಗಿ ಪೊಲೀಸರು ಆತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಿಎನ್ಎಸ್ (BNS), ಬಿಬಿಎಂಪಿ ಆರ್ಇಆರ್ಎ ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ಇವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






