ನಿರ್ಮಿತಿ ಕೇಂದ್ರದ ಇಂಜಿನಿಯರ್ ಶವ ಲಾಡ್ಜ್ ನಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!

ಗದಗ:- ಗದಗನ ಪಲ್ಲವಿ ಲಾಡ್ಜ್ನಲ್ಲಿ ಇಂಜಿನಿಯರ್ ಓರ್ವರ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದೆ. ನಿರ್ಮಿತಿ ಕೇಂದ್ರದ ಇಂಜಿನಿಯರ್ ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ ಕೊಲೆ ಮಾಡಿದ್ದಾರೆ. ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಪ್ರಮೋಶನಕ್ಕೆನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ ಮೂರು ವಿಷಯಕ್ಕೆ ಸಾವು ಅಂತ ಅನುಮಾನ ಇದೆ ಎಂದಿದ್ದಾರೆ.
ಹೀಗಾಗಿ ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






