ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಚಿವ ಎನ್ ಎಸ್ ಭೋಸರಾಜು ಅಸಮಾಧಾನ!

ಮೇ 5, 2025 - 18:50
ಮೇ 5, 2025 - 18:51
 0  10
ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಚಿವ ಎನ್ ಎಸ್ ಭೋಸರಾಜು ಅಸಮಾಧಾನ!

ಬೆಂಗಳೂರು:- ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎನ್ ಎಸ್ ಭೋಸರಾಜು ತೀವ್ರ ಅಸಮಧಾನ ಹೊರ ಹಾಕಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನಿರ್ದೇಶನ ಇದ್ದರೂ ಸಹ ಕೆಲವರು ಮಿಸ್ ಲೀಡ್ ಮಾಡ್ತಿದ್ದಾರೆ. ಅಂತಹವರ ವಿರುದ್ಧ ಕ್ರಮವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ತಕ್ಷಣ ಜನಿವಾರ ತೆಗೆಸಿದವರ ಮೇಲೆ ಕ್ರಮ ತೆಗದುಕೊಳ್ಳುತ್ತಾರೆ ಎಂದು ಹೇಳಿದರು. 

ಇನ್ನೂ ಹಾಲ್ ಟಿಕೆಟ್‌ನಲ್ಲಿ ಧಾರ್ಮಿಕ ಚಿಹ್ನೆ ಇರುವಂತ ಯಾವ ವಸ್ತು ಇಟ್ಟುಕೊಂಡು ಪರೀಕ್ಷೆಗೆ ಹೊಗಬಾರದು ಎಂಬ ಸೂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅದು ರಾಜ್ಯ ಸರ್ಕಾರ ಸೂಚನೆ ಅಲ್ಲ. ಕೇಂದ್ರ ಸರ್ಕಾರದ ಸೂಚನೆ. ಹೀಗಾಗಿ ಕೇಂದ್ರ ಸಚಿವರಾದ ವಿ.ಸೋಮಣ್ಣ ಅದನ್ನ ಹೇಳಿದ್ದಾರೆ. ಮಂಗಳಸೂತ್ರ ಹಾಗೂ ಜನಿವಾರ ತೆಗೆಯಬಾರದು ಎಂದು ಹೇಳಿದ್ದಾರೆ. ಅದೆಲ್ಲಾ ಕೇಂದ್ರ ಸರ್ಕಾರದ ಸೂಚನೆಗಳು ರಾಜ್ಯ ಸರ್ಕಾರದ್ದು ಅಲ್ಲ. ಅದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow