ನುಸುಳುಕೋರರು ಭಾರತಕ್ಕೆ ನುಗ್ಗುವುದಕ್ಕೆ ಕಡಿವಾಣ ಹಾಕಿದ್ದೇ ಬಿಜೆಪಿ ಸರ್ಕಾರ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ನುಸುಳುಕೋರರು ಭಾರತಕ್ಕೆ ನುಗ್ಗುವುದಕ್ಕೆ ಕಡಿವಾಣ ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನುಸುಳುಕೋರರು ಭಾರತಕ್ಕೆ ನುಗ್ಗುವುದಕ್ಕೆ ಕಡಿವಾಣ ಹಾಕಿದ್ದೇ ಬಿಜೆಪಿ ಸರ್ಕಾರ. ಆದರೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಬೆಂಗಳೂರು, ಹೈದರಾಬಾದ್, ಮುಂಬೈ, ಹುಬ್ಬಳ್ಳಿ ಸೇರಿ ಅನೇಕ ಕಡೆ ಬಾಂಬ್ ಸ್ಫೋಟಗಳಾಗಿವೆ. ಅದೆಲ್ಲವನ್ನೂ ಪರಮೇಶ್ವರ್ ನೆನಪು ಮಾಡಿಕೊಳ್ಳಲಿ. ಈ ವಿಷಯದಲ್ಲಿ ನಾವು ರಾಜಕಾರಣ ಮಾಡಿಲ್ಲ. ಪರಮೇಶ್ವರ ಅವರು ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ನಾವು ಸಜ್ಜನ, ದೇಶ ಮತ್ತು ರಾಜ್ಯದ ಬಗ್ಗೆ ಕಳಕಳಿ ಇರುವವರು ಎಂದು ತಿಳಿದುಕೊಂಡಿದ್ದೇವೆ. ರಾಹುಲ್ ಗಾಂಧಿಯಂತೆ ಚಿಲ್ಲರೆಯಾಗಿ ಮಾತನಾಡುವುದನ್ನು ಬಿಡಬೇಕು ಎಂದರು.
ಸಮಾಜವಾದಿ ಹೆಸರಲ್ಲಿ ಅಧಿಕಾರಕ್ಕೆ ಬಂದವರ ಬಂಡವಾಳ ಬಯಲಾಗಿದೆ. ಐದು ಜನರ ಮೇಲೆ ಈಗ ಎಫ್ಐಆರ್ ದಾಖಲಾಗಿದೆ. SCP, TSP ಅನುದಾನ ದುರ್ಬಳಕೆ ಆಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಧವಾ ವೇತನ, ವೃದ್ಧಾಪ್ಯ ವೇತನ, ಶಿಷ್ಯವೇತನ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ., ಹೈಕೋರ್ಟ್ ಸುದೀರ್ಘ ವಿಚಾರಣೆ ಬಳಿಕವೂ ಷಡ್ಯಂತ್ರ ಅನ್ನೋದು ಮೂರ್ಖತನ. ರಾಜ್ಯಪಾಲರು ಬಗ್ಗೆ ಆರೋಪದಲ್ಲಿ ಹುರುಳಿಲ್ಲ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






