ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿ ಪಕ್ಷದಿಂದ ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಉಚ್ಚಾಟನೆ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಹಿಂದೆ ಈ ಇಬ್ಬರೂ ನಾಯಕರು ಕೂಡ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು.
2019ರಲ್ಲಿ ಇಬ್ಬರೂ ಬಿಜೆಪಿ ಸೇರಿದ್ರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದ್ರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿ ಕೆಲಸ ಮಾಡಿದ್ರು. ಕೆಲ ದಿನಗಳಿಂದ ಮತ್ತೆ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ರು ಎನ್ನಲಾಗ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಇದೀಗ ಬಿಜೆಪಿ ಇಬ್ಬರು ನಾಯಕರಿಗೂ ಉಚ್ಚಾಟನೆ ಶಾಕ್ ನೀಡಿದೆ.
ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






