ಪತ್ನಿ ವಿಜಯಲಕ್ಷ್ಮೀ ಜೊತೆ ಭರತನಾಟ್ಯ ನೋಡಲು ಬಂದ ನಟ ದರ್ಶನ್..! ಫ್ಯಾನ್ಸ್ ಫುಲ್ ಖುಷ್

ಎಪ್ರಿಲ್ 21, 2025 - 18:01
ಎಪ್ರಿಲ್ 23, 2025 - 10:39
 0  14
ಪತ್ನಿ ವಿಜಯಲಕ್ಷ್ಮೀ ಜೊತೆ ಭರತನಾಟ್ಯ ನೋಡಲು ಬಂದ ನಟ ದರ್ಶನ್..! ಫ್ಯಾನ್ಸ್ ಫುಲ್ ಖುಷ್

ರೇಣುಕಾಸ್ವಾಮಿ ಪ್ರಕರಣದಲ್ಲಿ ರಿಲೀಫ್ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸದ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ಬಿ. ಸುರೇಶ್ ಮತ್ತು ಶೈಲಜಾ ನಾಗ್ ಪುತ್ರಿ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಏ.20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಎಡಿಎ ರಂಗಮಂದಿರದಲ್ಲಿ ನಡೆದಿದೆ.

ಈ ಹಿನ್ನೆಲೆ ವಿಜಯಲಕ್ಷ್ಮಿ ಜೊತೆ ಆಗಮಿಸಿ ದರ್ಶನ್ ಭರತನಾಟ್ಯ ಕಾರ್ಯಕ್ರಮ ವೀಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ.

ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ನಟ ದರ್ಶನ್ ಅವರು ಡೆವಿಲ್ ಸಿನಿಮಾದಲ್ಲಿ ನಟಿಸುತ್ತಿದ್ದರೆ,  ಪ್ರಕಾಶ್‌ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ರಾಜಸ್ಥಾನದಲ್ಲಿ ಕೆಲವು ಪ್ರಮುಖ ಹಂತದ ಶೂಟ್ ಮುಗಿಸಿ ಮರಳಿದ್ದಾರೆ. ಈಗ ನಮ್ಮ ರಾಜ್ಯದಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow